Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...