Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...