Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...