Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...