Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...