Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...