Homeಮುಖಪುಟದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ 'ಸಾಮೂಹಿಕ ಅನುಮಾನ'; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ...

ದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ‘ಸಾಮೂಹಿಕ ಅನುಮಾನ’; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ ಒತ್ತಾಯ

- Advertisement -
- Advertisement -

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟದ ನಂತರ ಹಲವಾರು ಉತ್ತರ ರಾಜ್ಯಗಳಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳು ಬೆದರಿಕೆ ಎದುರಿಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್‌ಎ) ಸೋಮವಾರ ಆರೋಪಿಸಿದೆ. ಸಾಮೂಹಿಕ ನಿಂದನೆ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಕೆಎಸ್‌ಎ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹೇಹಾಮಿ, “ದಾಳಿಯ ನಂತರ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ರಾಜ್ಯಗಳಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಕಿರುಕುಳಕ್ಕೊಳಗಾಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕಾಶ್ಮೀರ ವಿದ್ಯಾರ್ಥಿಗಳು ಭಯೋತ್ಪಾದನೆಯಲ್ಲಿ ಅಲ್ಲ, ಭಾರತದ ಪ್ರಜಾಪ್ರಭುತ್ವ ಮತ್ತು ಮುಖ್ಯವಾಹಿನಿಯಲ್ಲಿ ನಂಬಿಕೆ ಇಡುತ್ತಾರೆ. ಆದರೆ ಅವರನ್ನು ಅಧಿಕಾರಿಗಳು ಮತ್ತು ರಾಜ್ಯಗಳಾದ್ಯಂತ ಸ್ಥಳೀಯ ಜನರು ನಿಂದಿಸುತ್ತಿದ್ದಾರೆ. ಅನೇಕ ಮನೆಮಾಲೀಕರು ಕಾಶ್ಮೀರಿ ಬಾಡಿಗೆದಾರರನ್ನು ತಮ್ಮ ಕೊಠಡಿಗಳನ್ನು ಖಾಲಿ ಮಾಡುವಂತೆ ಕೇಳಿಕೊಂಡಿದ್ದಾರೆ, ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ಭಯದಿಂದ ಮನೆಗೆ ಮರಳಬೇಕಾಯಿತು” ಎಂದು ಖುಹೇಹಾಮಿ ಹೇಳಿದರು.

ಸ್ಫೋಟದ ಬಗ್ಗೆ ಯಾವುದೇ ತನಿಖೆಗೆ ತಮ್ಮ ಸಂಘಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಕೇಂದ್ರವು ಕಾಶ್ಮೀರಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕವಾಗಿ ಎದ್ದಿರುವ ಸಾಮೂಹಿಕ ಅನುಮಾನವನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದರು.

“ಪ್ರಧಾನ ಮಂತ್ರಿಗಳು ಸಾರ್ವಜನಿಕ ಹೇಳಿಕೆ ನೀಡಬೇಕೆಂದು ನಾವು ವಿನಂತಿಸುತ್ತೇವೆ. ಕಾಶ್ಮೀರಿಗಳು ಇತರ ನಾಗರಿಕರಂತೆ ಈ ದೇಶದ ಭಾಗ” ಎಂದು ಅವರು ಹೇಳಿದರು.

ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟವನ್ನು ಜೆಕೆಎಸ್ಎ ತೀವ್ರ ಪದಗಳಲ್ಲಿ ಖಂಡಿಸಿ, ನ್ಯಾಯಯುತ ತನಿಖೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿತು.

ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ 13 ಜನರ ಸಾವಿಗೆ ಕಾರಣವಾದ ಕಾರು ಸ್ಫೋಟವು ದೆಹಲಿ ಪೊಲೀಸ್ ವಿಶೇಷ ಕೋಶ, ಎನ್‌ಐಎ ಮತ್ತು ಅಪರಾಧ ಶಾಖೆಯನ್ನು ಒಳಗೊಂಡ ವ್ಯಾಪಕ, ಬಹು-ಸಂಸ್ಥೆ ತನಿಖೆಗೆ ನಾಂದಿ ಹಾಡಿದೆ. ತನಿಖೆಯ ಭಾಗವಾಗಿ ಹರಿಯಾಣದ ಅಲ್ ಫಲಾ ವಿಶ್ವವಿದ್ಯಾಲಯದ ಇಬ್ಬರು ವೈದ್ಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಯುಜಿಸಿ ಮತ್ತು ಎನ್‌ಎಎಸಿ ಗುರುತಿಸಿದ ನಿಯಂತ್ರಕ ಉಲ್ಲಂಘನೆಗಳ ನಂತರ ಪೊಲೀಸರು ಅಲ್ ಫಲಾ ವಿಶ್ವವಿದ್ಯಾಲಯದ ವಿರುದ್ಧ ವಂಚನೆ ಮತ್ತು ನಕಲಿ ಆರೋಪದ ಅಡಿಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಪರಿಶೀಲನೆಯಲ್ಲಿರುವ ವ್ಯಕ್ತಿಗಳ ವಿವರಗಳನ್ನು ಸಂಗ್ರಹಿಸಲು ಪೊಲೀಸ್ ತಂಡ ಶನಿವಾರ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಗೆ ಭೇಟಿ ನೀಡಿತು.

ಬಂಧಿತ ವೈದ್ಯರಾದ ಮೊಹಮ್ಮದ್ ಮತ್ತು ಮುಸ್ತಕೀಮ್, ಸ್ಫೋಟಗೊಂಡ ಕಾರಿನ ಚಾಲಕ ಡಾ. ಉಮರ್ ನಬಿಗೆ ಪರಿಚಿತರಾಗಿದ್ದರು. ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲ್ಪಟ್ಟಿದ್ದ ಡಾ. ಮುಜಮ್ಮಿಲ್ ಗನೈ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶಾಲವಾದ ಪಿತೂರಿಯಲ್ಲಿ ಅವರ ಸಂಭಾವ್ಯ ಪಾತ್ರವನ್ನು ನಿರ್ಣಯಿಸಲು ಅವರ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ.

ರಸಗೊಬ್ಬರವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಹೊತ್ತಿರುವ ಫರಿದಾಬಾದ್ ಮೂಲದ ವ್ಯಕ್ತಿಯ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಏಕೆಂದರೆ, ಎನ್‌ಪಿಕೆ ರಸಗೊಬ್ಬರ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪಡೆಯಲು ಮಾಡ್ಯೂಲ್ ಸುಮಾರು 26 ಲಕ್ಷ ರೂ.ಗಳನ್ನು ಸಂಗ್ರಹಿಸಿದೆ ಎಂದು ಪುರಾವೆಗಳಿಂದ ಕಂಡುಬಂದಿದೆ.

ಸ್ಫೋಟದ ನಂತರ, ಹೆಚ್ಚಿನ ಭದ್ರತಾ ಕ್ರಮಗಳ ಭಾಗವಾಗಿ ಫರಿದಾಬಾದ್‌ನಲ್ಲಿ ಮಾತ್ರ ಜಮ್ಮು ಮತ್ತು ಕಾಶ್ಮೀರದಿಂದ 500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭಿಕ ಯುಎಪಿಎ ಎಫ್‌ಐಆರ್ ಅನ್ನು ತನಿಖಾ ಸಂಸ್ಥೆಗೆ ವರ್ಗಾಯಿಸಿದ ನಂತರ ಎನ್‌ಐಎ ಈಗ ವ್ಯಾಪಕ ಪಿತೂರಿಯನ್ನು ತನಿಖೆ ಮಾಡುತ್ತಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...