Homeಮುಖಪುಟದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ 'ಸಾಮೂಹಿಕ ಅನುಮಾನ'; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ...

ದೆಹಲಿ ಕಾರು ಸ್ಫೋಟದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ‘ಸಾಮೂಹಿಕ ಅನುಮಾನ’; ಪ್ರಧಾನಿ ಮಧ್ಯಪ್ರವೇಶಕ್ಕೆ ಜೆಕೆಎಸ್‌ಎ ಒತ್ತಾಯ

- Advertisement -
- Advertisement -

ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಕಾರು ಸ್ಫೋಟದ ನಂತರ ಹಲವಾರು ಉತ್ತರ ರಾಜ್ಯಗಳಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳು ಬೆದರಿಕೆ ಎದುರಿಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿ ಸಂಘ (ಜೆಕೆಎಸ್‌ಎ) ಸೋಮವಾರ ಆರೋಪಿಸಿದೆ. ಸಾಮೂಹಿಕ ನಿಂದನೆ ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಕೆಎಸ್‌ಎ ರಾಷ್ಟ್ರೀಯ ಸಂಚಾಲಕ ನಾಸಿರ್ ಖುಹೇಹಾಮಿ, “ದಾಳಿಯ ನಂತರ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ರಾಜ್ಯಗಳಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳು ಕಿರುಕುಳಕ್ಕೊಳಗಾಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕಾಶ್ಮೀರ ವಿದ್ಯಾರ್ಥಿಗಳು ಭಯೋತ್ಪಾದನೆಯಲ್ಲಿ ಅಲ್ಲ, ಭಾರತದ ಪ್ರಜಾಪ್ರಭುತ್ವ ಮತ್ತು ಮುಖ್ಯವಾಹಿನಿಯಲ್ಲಿ ನಂಬಿಕೆ ಇಡುತ್ತಾರೆ. ಆದರೆ ಅವರನ್ನು ಅಧಿಕಾರಿಗಳು ಮತ್ತು ರಾಜ್ಯಗಳಾದ್ಯಂತ ಸ್ಥಳೀಯ ಜನರು ನಿಂದಿಸುತ್ತಿದ್ದಾರೆ. ಅನೇಕ ಮನೆಮಾಲೀಕರು ಕಾಶ್ಮೀರಿ ಬಾಡಿಗೆದಾರರನ್ನು ತಮ್ಮ ಕೊಠಡಿಗಳನ್ನು ಖಾಲಿ ಮಾಡುವಂತೆ ಕೇಳಿಕೊಂಡಿದ್ದಾರೆ, ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ಭಯದಿಂದ ಮನೆಗೆ ಮರಳಬೇಕಾಯಿತು” ಎಂದು ಖುಹೇಹಾಮಿ ಹೇಳಿದರು.

ಸ್ಫೋಟದ ಬಗ್ಗೆ ಯಾವುದೇ ತನಿಖೆಗೆ ತಮ್ಮ ಸಂಘಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಕೇಂದ್ರವು ಕಾಶ್ಮೀರಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕವಾಗಿ ಎದ್ದಿರುವ ಸಾಮೂಹಿಕ ಅನುಮಾನವನ್ನು ತಡೆಯಬೇಕು ಎಂದು ಅವರು ಒತ್ತಾಯಿಸಿದರು.

“ಪ್ರಧಾನ ಮಂತ್ರಿಗಳು ಸಾರ್ವಜನಿಕ ಹೇಳಿಕೆ ನೀಡಬೇಕೆಂದು ನಾವು ವಿನಂತಿಸುತ್ತೇವೆ. ಕಾಶ್ಮೀರಿಗಳು ಇತರ ನಾಗರಿಕರಂತೆ ಈ ದೇಶದ ಭಾಗ” ಎಂದು ಅವರು ಹೇಳಿದರು.

ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟವನ್ನು ಜೆಕೆಎಸ್ಎ ತೀವ್ರ ಪದಗಳಲ್ಲಿ ಖಂಡಿಸಿ, ನ್ಯಾಯಯುತ ತನಿಖೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿತು.

ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ 13 ಜನರ ಸಾವಿಗೆ ಕಾರಣವಾದ ಕಾರು ಸ್ಫೋಟವು ದೆಹಲಿ ಪೊಲೀಸ್ ವಿಶೇಷ ಕೋಶ, ಎನ್‌ಐಎ ಮತ್ತು ಅಪರಾಧ ಶಾಖೆಯನ್ನು ಒಳಗೊಂಡ ವ್ಯಾಪಕ, ಬಹು-ಸಂಸ್ಥೆ ತನಿಖೆಗೆ ನಾಂದಿ ಹಾಡಿದೆ. ತನಿಖೆಯ ಭಾಗವಾಗಿ ಹರಿಯಾಣದ ಅಲ್ ಫಲಾ ವಿಶ್ವವಿದ್ಯಾಲಯದ ಇಬ್ಬರು ವೈದ್ಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಯುಜಿಸಿ ಮತ್ತು ಎನ್‌ಎಎಸಿ ಗುರುತಿಸಿದ ನಿಯಂತ್ರಕ ಉಲ್ಲಂಘನೆಗಳ ನಂತರ ಪೊಲೀಸರು ಅಲ್ ಫಲಾ ವಿಶ್ವವಿದ್ಯಾಲಯದ ವಿರುದ್ಧ ವಂಚನೆ ಮತ್ತು ನಕಲಿ ಆರೋಪದ ಅಡಿಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಪರಿಶೀಲನೆಯಲ್ಲಿರುವ ವ್ಯಕ್ತಿಗಳ ವಿವರಗಳನ್ನು ಸಂಗ್ರಹಿಸಲು ಪೊಲೀಸ್ ತಂಡ ಶನಿವಾರ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಗೆ ಭೇಟಿ ನೀಡಿತು.

ಬಂಧಿತ ವೈದ್ಯರಾದ ಮೊಹಮ್ಮದ್ ಮತ್ತು ಮುಸ್ತಕೀಮ್, ಸ್ಫೋಟಗೊಂಡ ಕಾರಿನ ಚಾಲಕ ಡಾ. ಉಮರ್ ನಬಿಗೆ ಪರಿಚಿತರಾಗಿದ್ದರು. ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲ್ಪಟ್ಟಿದ್ದ ಡಾ. ಮುಜಮ್ಮಿಲ್ ಗನೈ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶಾಲವಾದ ಪಿತೂರಿಯಲ್ಲಿ ಅವರ ಸಂಭಾವ್ಯ ಪಾತ್ರವನ್ನು ನಿರ್ಣಯಿಸಲು ಅವರ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ.

ರಸಗೊಬ್ಬರವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಹೊತ್ತಿರುವ ಫರಿದಾಬಾದ್ ಮೂಲದ ವ್ಯಕ್ತಿಯ ಪಾತ್ರದ ಬಗ್ಗೆಯೂ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಏಕೆಂದರೆ, ಎನ್‌ಪಿಕೆ ರಸಗೊಬ್ಬರ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪಡೆಯಲು ಮಾಡ್ಯೂಲ್ ಸುಮಾರು 26 ಲಕ್ಷ ರೂ.ಗಳನ್ನು ಸಂಗ್ರಹಿಸಿದೆ ಎಂದು ಪುರಾವೆಗಳಿಂದ ಕಂಡುಬಂದಿದೆ.

ಸ್ಫೋಟದ ನಂತರ, ಹೆಚ್ಚಿನ ಭದ್ರತಾ ಕ್ರಮಗಳ ಭಾಗವಾಗಿ ಫರಿದಾಬಾದ್‌ನಲ್ಲಿ ಮಾತ್ರ ಜಮ್ಮು ಮತ್ತು ಕಾಶ್ಮೀರದಿಂದ 500 ಕ್ಕೂ ಹೆಚ್ಚು ಜನರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭಿಕ ಯುಎಪಿಎ ಎಫ್‌ಐಆರ್ ಅನ್ನು ತನಿಖಾ ಸಂಸ್ಥೆಗೆ ವರ್ಗಾಯಿಸಿದ ನಂತರ ಎನ್‌ಐಎ ಈಗ ವ್ಯಾಪಕ ಪಿತೂರಿಯನ್ನು ತನಿಖೆ ಮಾಡುತ್ತಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...