Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

ಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

- Advertisement -
- Advertisement -

ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಚೀನಾ ಪ್ರಜೆಗಳನ್ನು ಸಾಗಿಸುತ್ತಿದ್ದ ಬಸ್‌ ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಮೃತಪಪಟ್ಟಿದ್ದಾರೆ. ಮೃತರಲ್ಲಿ ಕನಿಷ್ಠ 6 ಜನರು ಚೀನಾ ಇಂಜನೀಯರ್‌ಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಇಬ್ಬರು ಪಾಕಿಸ್ತಾನಿ ಸೈನಿಕರು ಮೃತಪಟ್ಟಿರುವುದು ದೃಢಪಟ್ಟಿದೆ.

ಪಾಕಿಸ್ತಾನದಲ್ಲಿನ ಚೀನಾ ರಾಯಭಾರ ಕಚೇರಿಯು ತನ್ನ ಪ್ರಜೆಗಳ ಸಾವಿನ ವಿಷಯವನ್ನು ದೃಢಪಡಿಸಿದ್ದು ಘಟನೆಗೆ ಸಂಬಂಧಿಸಿ ತನಿಖೆ ನಡೆಸುವಂತೆ ಆಗ್ರಹಿಸಿದೆ. ಜೊತೆಗೆ ಧಾಳಿ ನಡೆಸಿದವರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ದಾಸು ಆಣೆಕಟ್ಟೆ ನಿರ್ಮಾಣದಲ್ಲಿ ತೊಡಗಿದ್ದ 37 ಚೀನಾ ಇಂಜಿನೀಯರ್‌ಗಳು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ರಕ್ಷಣೆಗೆ ಇಬ್ಬರು ಪಾಕಿಸ್ತಾನಿ ಯೋಧರು ಜೊತೆಯಿದ್ದರು. ಪ್ರಬಲ IED ದಾಳಿಯ ಭೀಕರತೆಗೆ ಬಸ್‌ ಸ್ಫೋಟಗೊಂಡಿದ್ದು ಇದುವರೆಗೆ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಇನ್ನು ಹಲವರು ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಅತಂಕ ಮನೆಮಾಡಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

“ಸ್ಫೋಟದ ನಂತರ ಬಸ್ ಆಳವಾದ ಪ್ರಪಾತಕ್ಕೆ ಬಿದ್ದಿದ್ದು, ಬಸ್‌ನಲ್ಲಿದ್ದ ಒಬ್ಬ ಚೀನಾದ ಎಂಜಿನಿಯರ್ ಮತ್ತು ಓರ್ವ ಸೈನಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಪಾಕಿಸ್ತಾನ ಸೇನೆ ಮತ್ತು ಇತರ ಇಲಾಖೆಗಳು  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗಾಯಗೊಂಡವರನ್ನು ಏರ್ ಆಂಬುಲೆನ್ಸ್ ಮೂಲಕ ರಕ್ಷಿಸಲು ಇಡೀ ಸರ್ಕಾರಿ ವ್ಯವಸ್ಥೆ ತೊಡಗಿಸಿಕೊಂಡಿದೆ. ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಬಸ್‌ನೊಳಗೆ ಸ್ಪೋಟಕಗಳನ್ನು ಇಡಲಾಗಿತ್ತೊ ಅಥವಾ ರಸ್ತೆ ಪಕ್ಕದಲ್ಲಿ ಸ್ಪೋಟಕಗಳನ್ನಿಟ್ಟು ಬಸ್‌ ಸ್ಫೋಟಿಸಲಾಗಿದೆಯೇ ಎಂಬ ಕುರಿತು ಇದುವರೆಗೆ ಮಾಹಿತಿ ತಿಳಿದು ಬಂದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಚೀನಾದ ಎಂಜಿನಿಯರ್‌ಗಳು ಮತ್ತು ಪಾಕಿಸ್ತಾನದ ನಿರ್ಮಾಣ ಕಾರ್ಮಿಕರು ಹಲವಾರು ವರ್ಷಗಳಿಂದ ದಾಸು ಜಲವಿದ್ಯುತ್ ಯೋಜನೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದುವರೆಗೆ  ಅಲ್ಲಿಯಾವುದೇ ದಾಳಿ ಸಂಭವಿಸಿರಲಿಲ್ಲ.

ಪಾಕಿಸ್ತಾನದಲ್ಲಿ ಕಳೆದ ಒಂದು ವಾರದಿಂದ ಸೇನಾಪಡೆಗಳನ್ನು ಗುರಿಯಾಗಿಸಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಮಂಗಳವಾರ 11 ಜನ ಪಾಕಿಸ್ತಾನ ಆರ್ಮಿಯ ಯೋಧರನ್ನು ತೆಹ್ರಿಕ್‌ ಎ ತಾಲಿಬಾನ್‌ ಉಗ್ರರು ಹತ್ಯೆಗೈದಿದ್ದರು. ಕೆಲವು ಸೈನಿಕರನ್ನು ಒತ್ತೆಯಾಳುಗಳನ್ನಾಗಿ ಉಗ್ರರು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಉತ್ತರ ಪ್ರಾಂತ್ಯವು ಅಪಘಾನಿಸ್ಥಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅಮೆರಿಕಾ ಸೇನಾಪಡೆಗಳು ಅಪಘಾನಿಸ್ತಾನವನ್ನು ತೊರೆಯುತ್ತಿರುವುದರಿಂದ ತಾಲಿಬಾನ್‌ ಪ್ರಾಬಲ್ಯ ಹೆಚ್ಚುತ್ತಿದ್ದು ಕಳೆದೊಂದು ತಿಂಗಳಿನಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಅಧಿಕಗೊಂಡಿವೆ.

ಇದನ್ನೂ ಓದಿ: ಪಾಕಿಸ್ತಾನ: ಉಗ್ರರಿಂದ 11 ಜನ ಸೈನಿಕರ ಹತ್ಯೆ-ಯೋಧರ ಅಪಹರಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...