Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

ಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

- Advertisement -
- Advertisement -

ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಚೀನಾ ಪ್ರಜೆಗಳನ್ನು ಸಾಗಿಸುತ್ತಿದ್ದ ಬಸ್‌ ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಮೃತಪಪಟ್ಟಿದ್ದಾರೆ. ಮೃತರಲ್ಲಿ ಕನಿಷ್ಠ 6 ಜನರು ಚೀನಾ ಇಂಜನೀಯರ್‌ಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಇಬ್ಬರು ಪಾಕಿಸ್ತಾನಿ ಸೈನಿಕರು ಮೃತಪಟ್ಟಿರುವುದು ದೃಢಪಟ್ಟಿದೆ.

ಪಾಕಿಸ್ತಾನದಲ್ಲಿನ ಚೀನಾ ರಾಯಭಾರ ಕಚೇರಿಯು ತನ್ನ ಪ್ರಜೆಗಳ ಸಾವಿನ ವಿಷಯವನ್ನು ದೃಢಪಡಿಸಿದ್ದು ಘಟನೆಗೆ ಸಂಬಂಧಿಸಿ ತನಿಖೆ ನಡೆಸುವಂತೆ ಆಗ್ರಹಿಸಿದೆ. ಜೊತೆಗೆ ಧಾಳಿ ನಡೆಸಿದವರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ದಾಸು ಆಣೆಕಟ್ಟೆ ನಿರ್ಮಾಣದಲ್ಲಿ ತೊಡಗಿದ್ದ 37 ಚೀನಾ ಇಂಜಿನೀಯರ್‌ಗಳು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ರಕ್ಷಣೆಗೆ ಇಬ್ಬರು ಪಾಕಿಸ್ತಾನಿ ಯೋಧರು ಜೊತೆಯಿದ್ದರು. ಪ್ರಬಲ IED ದಾಳಿಯ ಭೀಕರತೆಗೆ ಬಸ್‌ ಸ್ಫೋಟಗೊಂಡಿದ್ದು ಇದುವರೆಗೆ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಇನ್ನು ಹಲವರು ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಅತಂಕ ಮನೆಮಾಡಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

“ಸ್ಫೋಟದ ನಂತರ ಬಸ್ ಆಳವಾದ ಪ್ರಪಾತಕ್ಕೆ ಬಿದ್ದಿದ್ದು, ಬಸ್‌ನಲ್ಲಿದ್ದ ಒಬ್ಬ ಚೀನಾದ ಎಂಜಿನಿಯರ್ ಮತ್ತು ಓರ್ವ ಸೈನಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಪಾಕಿಸ್ತಾನ ಸೇನೆ ಮತ್ತು ಇತರ ಇಲಾಖೆಗಳು  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗಾಯಗೊಂಡವರನ್ನು ಏರ್ ಆಂಬುಲೆನ್ಸ್ ಮೂಲಕ ರಕ್ಷಿಸಲು ಇಡೀ ಸರ್ಕಾರಿ ವ್ಯವಸ್ಥೆ ತೊಡಗಿಸಿಕೊಂಡಿದೆ. ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಬಸ್‌ನೊಳಗೆ ಸ್ಪೋಟಕಗಳನ್ನು ಇಡಲಾಗಿತ್ತೊ ಅಥವಾ ರಸ್ತೆ ಪಕ್ಕದಲ್ಲಿ ಸ್ಪೋಟಕಗಳನ್ನಿಟ್ಟು ಬಸ್‌ ಸ್ಫೋಟಿಸಲಾಗಿದೆಯೇ ಎಂಬ ಕುರಿತು ಇದುವರೆಗೆ ಮಾಹಿತಿ ತಿಳಿದು ಬಂದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಚೀನಾದ ಎಂಜಿನಿಯರ್‌ಗಳು ಮತ್ತು ಪಾಕಿಸ್ತಾನದ ನಿರ್ಮಾಣ ಕಾರ್ಮಿಕರು ಹಲವಾರು ವರ್ಷಗಳಿಂದ ದಾಸು ಜಲವಿದ್ಯುತ್ ಯೋಜನೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದುವರೆಗೆ  ಅಲ್ಲಿಯಾವುದೇ ದಾಳಿ ಸಂಭವಿಸಿರಲಿಲ್ಲ.

ಪಾಕಿಸ್ತಾನದಲ್ಲಿ ಕಳೆದ ಒಂದು ವಾರದಿಂದ ಸೇನಾಪಡೆಗಳನ್ನು ಗುರಿಯಾಗಿಸಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಮಂಗಳವಾರ 11 ಜನ ಪಾಕಿಸ್ತಾನ ಆರ್ಮಿಯ ಯೋಧರನ್ನು ತೆಹ್ರಿಕ್‌ ಎ ತಾಲಿಬಾನ್‌ ಉಗ್ರರು ಹತ್ಯೆಗೈದಿದ್ದರು. ಕೆಲವು ಸೈನಿಕರನ್ನು ಒತ್ತೆಯಾಳುಗಳನ್ನಾಗಿ ಉಗ್ರರು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಉತ್ತರ ಪ್ರಾಂತ್ಯವು ಅಪಘಾನಿಸ್ಥಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅಮೆರಿಕಾ ಸೇನಾಪಡೆಗಳು ಅಪಘಾನಿಸ್ತಾನವನ್ನು ತೊರೆಯುತ್ತಿರುವುದರಿಂದ ತಾಲಿಬಾನ್‌ ಪ್ರಾಬಲ್ಯ ಹೆಚ್ಚುತ್ತಿದ್ದು ಕಳೆದೊಂದು ತಿಂಗಳಿನಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಅಧಿಕಗೊಂಡಿವೆ.

ಇದನ್ನೂ ಓದಿ: ಪಾಕಿಸ್ತಾನ: ಉಗ್ರರಿಂದ 11 ಜನ ಸೈನಿಕರ ಹತ್ಯೆ-ಯೋಧರ ಅಪಹರಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...