Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

ಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

- Advertisement -
- Advertisement -

ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಚೀನಾ ಪ್ರಜೆಗಳನ್ನು ಸಾಗಿಸುತ್ತಿದ್ದ ಬಸ್‌ ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಮೃತಪಪಟ್ಟಿದ್ದಾರೆ. ಮೃತರಲ್ಲಿ ಕನಿಷ್ಠ 6 ಜನರು ಚೀನಾ ಇಂಜನೀಯರ್‌ಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಇಬ್ಬರು ಪಾಕಿಸ್ತಾನಿ ಸೈನಿಕರು ಮೃತಪಟ್ಟಿರುವುದು ದೃಢಪಟ್ಟಿದೆ.

ಪಾಕಿಸ್ತಾನದಲ್ಲಿನ ಚೀನಾ ರಾಯಭಾರ ಕಚೇರಿಯು ತನ್ನ ಪ್ರಜೆಗಳ ಸಾವಿನ ವಿಷಯವನ್ನು ದೃಢಪಡಿಸಿದ್ದು ಘಟನೆಗೆ ಸಂಬಂಧಿಸಿ ತನಿಖೆ ನಡೆಸುವಂತೆ ಆಗ್ರಹಿಸಿದೆ. ಜೊತೆಗೆ ಧಾಳಿ ನಡೆಸಿದವರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ದಾಸು ಆಣೆಕಟ್ಟೆ ನಿರ್ಮಾಣದಲ್ಲಿ ತೊಡಗಿದ್ದ 37 ಚೀನಾ ಇಂಜಿನೀಯರ್‌ಗಳು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ರಕ್ಷಣೆಗೆ ಇಬ್ಬರು ಪಾಕಿಸ್ತಾನಿ ಯೋಧರು ಜೊತೆಯಿದ್ದರು. ಪ್ರಬಲ IED ದಾಳಿಯ ಭೀಕರತೆಗೆ ಬಸ್‌ ಸ್ಫೋಟಗೊಂಡಿದ್ದು ಇದುವರೆಗೆ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಇನ್ನು ಹಲವರು ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಅತಂಕ ಮನೆಮಾಡಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

“ಸ್ಫೋಟದ ನಂತರ ಬಸ್ ಆಳವಾದ ಪ್ರಪಾತಕ್ಕೆ ಬಿದ್ದಿದ್ದು, ಬಸ್‌ನಲ್ಲಿದ್ದ ಒಬ್ಬ ಚೀನಾದ ಎಂಜಿನಿಯರ್ ಮತ್ತು ಓರ್ವ ಸೈನಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಪಾಕಿಸ್ತಾನ ಸೇನೆ ಮತ್ತು ಇತರ ಇಲಾಖೆಗಳು  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗಾಯಗೊಂಡವರನ್ನು ಏರ್ ಆಂಬುಲೆನ್ಸ್ ಮೂಲಕ ರಕ್ಷಿಸಲು ಇಡೀ ಸರ್ಕಾರಿ ವ್ಯವಸ್ಥೆ ತೊಡಗಿಸಿಕೊಂಡಿದೆ. ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಬಸ್‌ನೊಳಗೆ ಸ್ಪೋಟಕಗಳನ್ನು ಇಡಲಾಗಿತ್ತೊ ಅಥವಾ ರಸ್ತೆ ಪಕ್ಕದಲ್ಲಿ ಸ್ಪೋಟಕಗಳನ್ನಿಟ್ಟು ಬಸ್‌ ಸ್ಫೋಟಿಸಲಾಗಿದೆಯೇ ಎಂಬ ಕುರಿತು ಇದುವರೆಗೆ ಮಾಹಿತಿ ತಿಳಿದು ಬಂದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಚೀನಾದ ಎಂಜಿನಿಯರ್‌ಗಳು ಮತ್ತು ಪಾಕಿಸ್ತಾನದ ನಿರ್ಮಾಣ ಕಾರ್ಮಿಕರು ಹಲವಾರು ವರ್ಷಗಳಿಂದ ದಾಸು ಜಲವಿದ್ಯುತ್ ಯೋಜನೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದುವರೆಗೆ  ಅಲ್ಲಿಯಾವುದೇ ದಾಳಿ ಸಂಭವಿಸಿರಲಿಲ್ಲ.

ಪಾಕಿಸ್ತಾನದಲ್ಲಿ ಕಳೆದ ಒಂದು ವಾರದಿಂದ ಸೇನಾಪಡೆಗಳನ್ನು ಗುರಿಯಾಗಿಸಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಮಂಗಳವಾರ 11 ಜನ ಪಾಕಿಸ್ತಾನ ಆರ್ಮಿಯ ಯೋಧರನ್ನು ತೆಹ್ರಿಕ್‌ ಎ ತಾಲಿಬಾನ್‌ ಉಗ್ರರು ಹತ್ಯೆಗೈದಿದ್ದರು. ಕೆಲವು ಸೈನಿಕರನ್ನು ಒತ್ತೆಯಾಳುಗಳನ್ನಾಗಿ ಉಗ್ರರು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಉತ್ತರ ಪ್ರಾಂತ್ಯವು ಅಪಘಾನಿಸ್ಥಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅಮೆರಿಕಾ ಸೇನಾಪಡೆಗಳು ಅಪಘಾನಿಸ್ತಾನವನ್ನು ತೊರೆಯುತ್ತಿರುವುದರಿಂದ ತಾಲಿಬಾನ್‌ ಪ್ರಾಬಲ್ಯ ಹೆಚ್ಚುತ್ತಿದ್ದು ಕಳೆದೊಂದು ತಿಂಗಳಿನಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಅಧಿಕಗೊಂಡಿವೆ.

ಇದನ್ನೂ ಓದಿ: ಪಾಕಿಸ್ತಾನ: ಉಗ್ರರಿಂದ 11 ಜನ ಸೈನಿಕರ ಹತ್ಯೆ-ಯೋಧರ ಅಪಹರಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...