Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...