Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...