Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...