Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...