Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...