Homeಅಂತರಾಷ್ಟ್ರೀಯಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರೀ ಪ್ರವಾಹ, ಭೂಕುಸಿತ : ಸಾವಿರ ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ದಕ್ಷಿಣ ಏಷ್ಯಾದ ನಾಲ್ಕು ದೇಶಗಳಾದ ಶ್ರೀಲಂಕಾ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಉಂಟಾದ ಭಾರೀ ಪ್ರವಾಹ ಮತ್ತು ಭೂಕುಸಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಒಂದು ಸಾವಿರ ದಾಟಿದೆ ಎಂದು ಸೋಮವಾರ (ಡಿಸೆಂಬರ್ 1) theguardian.com ವರದಿ ಮಾಡಿದೆ.

ದಿತ್ವಾ ಚಂಡುಮಾರುತ ಸೇರಿದಂತೆ ಹವಾಮಾನದಲ್ಲಿ ಉಂಟಾದ ಪ್ರತ್ಯೇಕ ವೈಪರೀತ್ಯಗಳಿಂದ ಸಂಪೂರ್ಣ ಶ್ರೀಲಂಕಾ, ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಹೆಚ್ಚಿನ ಭಾಗಗಳು, ದಕ್ಷಿಣ ಥೈಲ್ಯಾಂಡ್ ಮತ್ತು ಉತ್ತರ ಮಲೇಷ್ಯಾದಲ್ಲಿ ಭಾರೀ ಮಳೆಯಾಗಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಶ್ರೀಲಂಕಾ ಮತ್ತು ಇಂಡೋನೇಷ್ಯಾ ದೇಶಗಳು ಪ್ರಕೃತಿ ವಿಕೋಪದ ಸಂತ್ರಸ್ತರ ಸಹಾಯಕ್ಕೆ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದೆ.

ಸೋಮವಾರ ಉತ್ತರ ಸುಮಾತ್ರಕ್ಕೆ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಭೇಟಿ ನೀಡಿದ್ದು, “ಅಪಾಯದ ಪರಿಸ್ಥಿತಿ ಕೊನೆಗೊಂಡಿದೆ. ಈಗ ಸಂತ್ರಸ್ತರಿಗೆ ನೆರವು ನೀಡುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಕೆಲ ದುರ್ಗಮ ಪ್ರದೇಶದ ಹಳ್ಳಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕಿದೆ” ಎಂದು ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 442 ಜನರು ಸಾವನ್ನಪ್ಪಿದ್ದು, ನೂರಾರು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಬೋವೊ ಸರ್ಕಾರದ ಮೇಲೆ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಡ ಹೆಚ್ಚುತ್ತಿದೆ.

2018ರ ಬೃಹತ್ ಭೂಕಂಪ ಮತ್ತು ನಂತರದ ಸುನಾಮಿಯಿಂದ ಸುಲವೇಸಿಯಲ್ಲಿ 2,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಇಂಡೋನೇಷ್ಯಾದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಇದು ಅತ್ಯಂತ ಭೀಕರವಾಗಿದೆ.
ಪ್ರಬೋವೊ ಸರ್ಕಾರ ಇದುವರೆಗೆ ಅಂತಾರಾಷ್ಟ್ರೀಯ ನೆರವು ಕೋರಿಲ್ಲ.

ಪ್ರವಾಹ, ಭೂಕುಸಿತ ಸಂಭವಿಸಿದ ಕೆಲ ಪ್ರದೇಶಗಳಿಗೆ ರಸ್ತೆ ಮೂಲಕ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸರ್ಕಾರ ನೆರವು ಹೊತ್ತ ಮೂರು ಯುದ್ಧನೌಕೆಗಳು ಮತ್ತು ಎರಡು ಆಸ್ಪತ್ರೆ ಹಡಗುಗಳನ್ನು ಆ ಪ್ರದೇಶಗಳಿಗೆ ಕಳುಹಿಸಿದೆ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಹಾನಿ

ದಿತ್ವಾ ಚಂಡುಮಾರುತದ ಪರಿಣಾಮ ತೀವ್ರ ಮಳೆಯಾದ ಕಾರಣ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ನೂರಾರು ಜನರು ಪ್ರಾಣ ಕಳೆದುಕೊಂದ್ದಾರೆ ಮತ್ತು ಸಾವಿರಾರು ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಸರ್ಕಾರ ಈಗಾಗಲೇ ಅಂತಾರಾಷ್ಟ್ರೀಯ ನೆರವು ಕೋರಿದೆ. ಪ್ರವಾಹ ಮತ್ತು ಭೂಕುಸಿತ ಉಂಟಾದ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ತಲುಪಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದೆ.

ಕನಿಷ್ಠ 340 ಜನರು ಸಾವನ್ನಪ್ಪಿದ್ದಾರೆ ಎಂದು ಶ್ರೀಲಂಕಾ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇನ್ನೂ ಅನೇಕರು ಕಾಣೆಯಾಗಿದ್ದಾರೆ. ಹಾಗಾಗಿ, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜಧಾನಿ ಕೊಲಂಬೊದಲ್ಲಿ ಭಾನುವಾರ ರಾತ್ರಿಯಿಡೀ ಪ್ರವಾಹ ನೀರು ತುಂಬಿತ್ತು. ಸೋಮವಾರ ಬೆಳಿಗ್ಗೆ ಮಳೆ ನಿಂತಿರುವುದರಿಂದ ನೀರು ಕಡಿಮೆಯಾಗುವ ಭರವಸೆ ಇದೆ. ಚಂಡಮಾರುತದ ಆರ್ಭಟ ಸ್ವಲ್ಪ ತಣ್ಣಗಾದ ಹಿನ್ನೆಲೆ ಕೆಲ ಅಂಗಡಿಗಳು ಮತ್ತು ಕಚೇರಿಗಳು ಬಾಗಿಲು ತೆರೆಯಲು ಪ್ರಾರಂಭಿಸಿವೆ ಎಂದು ವರದಿಗಳು ಹೇಳಿವೆ.

ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳು ಉರುಳಿ ಬಿದ್ದಿರುವ ಮರಗಳು ಮತ್ತು ಕುಸಿದ ಮಣ್ಣು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿವೆ. ಹೆಚ್ಚು ಹಾನಿಗೊಳಗಾದ ಕೇಂದ್ರ ಪ್ರದೇಶದಲ್ಲಿನ ಹಾನಿಯ ಪ್ರಮಾಣವು ಈಗ ಬಹಿರಂಗಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತನ್ನು ಎದುರಿಸಲು ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿರುವ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ, ದೇಶವನ್ನು ಮತ್ತೆ ನಿರ್ಮಾಣ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನಾವು ನಮ್ಮ ಇತಿಹಾಸದಲ್ಲಿಯೇ ಅತಿದೊಡ್ಡ ಮತ್ತು ಅತ್ಯಂತ ಸವಾಲಿನ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದ್ದೇವೆ” ಎಂದು ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ಖಂಡಿತ, ಈ ಹಿಂದಿಗಿಂತ ಚೆನ್ನಾಗಿ ರಾಷ್ಟ್ರವನ್ನು ನಿರ್ಮಿಸುತ್ತೇವೆ” ಎಂದಿದ್ದಾರೆ.

2004ರ ವಿನಾಶಕಾರಿ ಏಷ್ಯನ್ ಸುನಾಮಿಯ ನಂತರ ಶ್ರೀಲಂಕಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ನಷ್ಟ ಮತ್ತು ಹಾನಿ ಇದಾಗಿದೆ. 2004ರ ಸುನಾಮಿಯಲ್ಲಿ ಸುಮಾರು 31,000 ಜನರು ಬಲಿಯಾಗಿ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದರು.

ಭಾನುವಾರ ಮಧ್ಯಾಹ್ನದ ಹೊತ್ತಿಗೆ ಶ್ರೀಲಂಕಾದಾದ್ಯಂತ ಮಳೆ ಕಡಿಮೆಯಾದರೂ, ರಾಜಧಾನಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಅಧಿಕಾರಿಗಳು ಪ್ರಮುಖ ಪರಿಹಾರ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು theguardian.com ವರದಿ ಮಾಡಿದೆ.

ಅಪಾಯದಲ್ಲಿ ಸಿಲುಕಿರುವ ಜನರನ್ನು ಸಾಗಿಸಲು ಮತ್ತು ಆಹಾರ ತಲುಪಿಸಲು ಮಿಲಿಟರಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಿದ ಒಂದು ಹೆಲಿಕಾಫ್ಟರ್ ಭಾನುವಾರ ಸಂಜೆ ಕೊಲಂಬೊದ ಉತ್ತರದಲ್ಲಿ ಅಪಘಾತಕ್ಕೀಡಾಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಹೆಚ್ಚಿನ ಭಾಗವು ವಾರ್ಷಿಕ ಮಾನ್ಸೂನ್ ಋತುವಿನಲ್ಲಿದೆ. ಇದರಿಂದ ಆಗಾಗ್ಗೆ ಭಾರೀ ಮಳೆಯಾಗುತ್ತಿದೆ. ಪರಿಣಾಮ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಸಂಭವಿಸುತ್ತಿದೆ.

ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಮಲೇಷ್ಯಾದಲ್ಲಿ ಉಂಟಾದ ಪ್ರವಾಹವು, ವಿಶೇಷವಾಗಿ ಸುಮಾತ್ರಾ ದ್ವೀಪದಲ್ಲಿ ಭಾರೀ ಮಳೆಗೆ ಕಾರಣವಾದ ಅಪರೂಪದ ಉಷ್ಣವಲಯದ ಚಂಡಮಾರುತ ದಿತ್ವಾದಿಂದ ಸಂಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...