Homeಮುಖಪುಟನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ (NEP) ಕರಡನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಭಾರೀ ವಿರೋಧ ಕಂಡುಬಂದಿದೆ. NEP ಯನ್ನು ತಮಿಳುನಾಡು ತಿರಸ್ಕರಿಸುತ್ತದೆ ಎಂಬ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು ಟ್ವಿಟ್ಟರ್‌ನಲ್ಲಿ TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಮೂವತ್ತು ಕೋಟಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಏಕೆ ಇಷ್ಟು ತುರ್ತು?  ಮೂರು ವರ್ಷದ ಮಗು ಮೂರು ಭಾಷೆಗಳನ್ನು ಓದಬಹುದೇ? ದೇಶದ 1848 ಶಾಲೆಗಳು ಮುಚ್ಚಲ್ಪಡಲಿವೆ ಎಂಬುದಕ್ಕೆ ಉತ್ತರವೇನು? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಮುಂದಿನ ಎರಡು ದಶಕಗಳ ಭಾರತದ ಶಿಕ್ಷಣದ ರೋಡ್‌ ಮ್ಯಾಪ್‌ ಆಗಲಿರುವ NEP ಯನ್ನು ಕೊರೊನಾ ಸಾಂಕ್ರಾಮಿಕದ ನಡುವೆ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವ ಅನ್ಯಾಯ ಎಂದು ಹಲವರು ದೂರಿದ್ದಾರೆ.

ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಮುಕ್ತ ಅವಕಾಶ ನೀಡುವುದು. ಯುಜಿಸಿ (ಯುನಿವರ್ಸಿಟಿ ಗ್ರಾಂಟ್ ಕಮಿಷನ್) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯನ್ನು ಕಿತ್ತುಹಾಕುವ ಹೊಸ ಶಿಕ್ಷಣ ನೀತಿ ನಮಗೆ ಬೇಡ ಎಂದು ಹಲವರು ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿಯಲ್ಲಿ 2035ರ ವೇಳೆಗೆ 50% ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಬೇಕೆಂಬ ಗುರಿ ಹೊಂದಿದೆ. ಈ ಗುರಿಯನ್ನು ಈಗಾಗಲೇ ತಮಿಳುನಾಡಿ ಸಾಧಿಸಿಯಾಗಿದೆ. ನಿಮ್ಮ ಎನ್‌ಇಪಿ ನಮಗೆ ಬೇಡ ಎಂದು ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಶಿಕ್ಷಣವು ಮೂಲಭೂತ ಮಾನವ ಹಕ್ಕು. ಅದು ಮೇಲ್ವರ್ಗಕ್ಕೆ ಮಾತ್ರ ಇರಬಾರದು. ಈ ನೀತಿಯು ಜಾರಿಗೆ ಬಂದರೆ ಬಡ ಜನರಿಗೆ ಶಿಕ್ಷಣವನ್ನು ಕಠಿಣವಾಗಿಸುತ್ತಿದೆ, ನಮಗೆ ಅಂತಹ ನೀತಿ ಅಗತ್ಯವಿಲ್ಲ. ನಾವು ಶಿಕ್ಷಣದಲ್ಲಿ ಚೆನ್ನಾಗಿ ಪ್ರಗತಿ ಹೊಂದಿದ್ದೇವೆ, ಅನಗತ್ಯ ನೀತಿಯನ್ನು ಹೇರಬೇಡಿ, ನಮ್ಮಿಂದ ಕಲಿಯಿರಿ ಎಂದು ಅನ್ಬುಲಗು ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷದ ಹೆಸರಿನಲ್ಲಿ ಹಿಂದಿ ಹೇರಿಕೆಯನ್ನು ಸಹ ಹಲವಾರು ಜನ ವಿರೋಧಿಸಿದ್ದಾರೆ. ಹಿಂದಿ ನಮ್ಮ ಮಾತೃಭಾಷೆಯಲ್ಲ, ರಾಷ್ಟ್ರಭಾಷೆಯಲ್ಲ, ಸಂಪರ್ಕಭಾಷೆಯೂ ಅಲ್ಲ, ಹೆಚ್ಚು ಜನರು ಮಾತನಾಡುವ ಭಾಷೆಯೂ ಅಲ್ಲ. ಹಾಗಾಗಿ ನಮಗೆ ಹಿಂದಿ ಬೇಡ, ತಮಿಳು ಮತ್ತು ಇಂಗ್ಲಿಷ್ ಸಾಕು ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ #NEPisBrahmanism (ಎನ್‌ಇಪಿ ಎಂದರೆ ಬ್ರಾಹ್ಮಣ್ಯಕರಣ) ಎಂಬ ಹ್ಯಾಷ್‌ಟ್ಯಾಗ್ ಸಹ ಟ್ರೆಂಡ್ ಆಗಿದೆ. ಈಗಾಗಲೇ ಜಾತಿ ತಾರತಮ್ಯವನ್ನು ಎನ್‌ಇಪಿ ಹೆಚ್ಚು ಮಾಡುತ್ತದೆ. ಉನ್ನತ ಜಾತಿಗಳ ಹಿತ ಕಾಯಲು ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...