Homeಮುಖಪುಟನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ (NEP) ಕರಡನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಭಾರೀ ವಿರೋಧ ಕಂಡುಬಂದಿದೆ. NEP ಯನ್ನು ತಮಿಳುನಾಡು ತಿರಸ್ಕರಿಸುತ್ತದೆ ಎಂಬ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು ಟ್ವಿಟ್ಟರ್‌ನಲ್ಲಿ TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಮೂವತ್ತು ಕೋಟಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಏಕೆ ಇಷ್ಟು ತುರ್ತು?  ಮೂರು ವರ್ಷದ ಮಗು ಮೂರು ಭಾಷೆಗಳನ್ನು ಓದಬಹುದೇ? ದೇಶದ 1848 ಶಾಲೆಗಳು ಮುಚ್ಚಲ್ಪಡಲಿವೆ ಎಂಬುದಕ್ಕೆ ಉತ್ತರವೇನು? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಮುಂದಿನ ಎರಡು ದಶಕಗಳ ಭಾರತದ ಶಿಕ್ಷಣದ ರೋಡ್‌ ಮ್ಯಾಪ್‌ ಆಗಲಿರುವ NEP ಯನ್ನು ಕೊರೊನಾ ಸಾಂಕ್ರಾಮಿಕದ ನಡುವೆ ತರಾತುರಿಯಲ್ಲಿ ಜಾರಿಗೊಳಿಸುತ್ತಿರುವ ಅನ್ಯಾಯ ಎಂದು ಹಲವರು ದೂರಿದ್ದಾರೆ.

ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಮುಕ್ತ ಅವಕಾಶ ನೀಡುವುದು. ಯುಜಿಸಿ (ಯುನಿವರ್ಸಿಟಿ ಗ್ರಾಂಟ್ ಕಮಿಷನ್) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯನ್ನು ಕಿತ್ತುಹಾಕುವ ಹೊಸ ಶಿಕ್ಷಣ ನೀತಿ ನಮಗೆ ಬೇಡ ಎಂದು ಹಲವರು ಒತ್ತಾಯಿಸಿದ್ದಾರೆ.

ಹೊಸ ಶಿಕ್ಷಣ ನೀತಿಯಲ್ಲಿ 2035ರ ವೇಳೆಗೆ 50% ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದಾಖಲಾಗಬೇಕೆಂಬ ಗುರಿ ಹೊಂದಿದೆ. ಈ ಗುರಿಯನ್ನು ಈಗಾಗಲೇ ತಮಿಳುನಾಡಿ ಸಾಧಿಸಿಯಾಗಿದೆ. ನಿಮ್ಮ ಎನ್‌ಇಪಿ ನಮಗೆ ಬೇಡ ಎಂದು ಬಳಕೆದಾರರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಶಿಕ್ಷಣವು ಮೂಲಭೂತ ಮಾನವ ಹಕ್ಕು. ಅದು ಮೇಲ್ವರ್ಗಕ್ಕೆ ಮಾತ್ರ ಇರಬಾರದು. ಈ ನೀತಿಯು ಜಾರಿಗೆ ಬಂದರೆ ಬಡ ಜನರಿಗೆ ಶಿಕ್ಷಣವನ್ನು ಕಠಿಣವಾಗಿಸುತ್ತಿದೆ, ನಮಗೆ ಅಂತಹ ನೀತಿ ಅಗತ್ಯವಿಲ್ಲ. ನಾವು ಶಿಕ್ಷಣದಲ್ಲಿ ಚೆನ್ನಾಗಿ ಪ್ರಗತಿ ಹೊಂದಿದ್ದೇವೆ, ಅನಗತ್ಯ ನೀತಿಯನ್ನು ಹೇರಬೇಡಿ, ನಮ್ಮಿಂದ ಕಲಿಯಿರಿ ಎಂದು ಅನ್ಬುಲಗು ಎಂಬುವವರು ಅಭಿಪ್ರಾಯಪಟ್ಟಿದ್ದಾರೆ.

ತ್ರಿಭಾಷದ ಹೆಸರಿನಲ್ಲಿ ಹಿಂದಿ ಹೇರಿಕೆಯನ್ನು ಸಹ ಹಲವಾರು ಜನ ವಿರೋಧಿಸಿದ್ದಾರೆ. ಹಿಂದಿ ನಮ್ಮ ಮಾತೃಭಾಷೆಯಲ್ಲ, ರಾಷ್ಟ್ರಭಾಷೆಯಲ್ಲ, ಸಂಪರ್ಕಭಾಷೆಯೂ ಅಲ್ಲ, ಹೆಚ್ಚು ಜನರು ಮಾತನಾಡುವ ಭಾಷೆಯೂ ಅಲ್ಲ. ಹಾಗಾಗಿ ನಮಗೆ ಹಿಂದಿ ಬೇಡ, ತಮಿಳು ಮತ್ತು ಇಂಗ್ಲಿಷ್ ಸಾಕು ಎಂದು ಟ್ವೀಟ್ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ #NEPisBrahmanism (ಎನ್‌ಇಪಿ ಎಂದರೆ ಬ್ರಾಹ್ಮಣ್ಯಕರಣ) ಎಂಬ ಹ್ಯಾಷ್‌ಟ್ಯಾಗ್ ಸಹ ಟ್ರೆಂಡ್ ಆಗಿದೆ. ಈಗಾಗಲೇ ಜಾತಿ ತಾರತಮ್ಯವನ್ನು ಎನ್‌ಇಪಿ ಹೆಚ್ಚು ಮಾಡುತ್ತದೆ. ಉನ್ನತ ಜಾತಿಗಳ ಹಿತ ಕಾಯಲು ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...