Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...