Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...