Homeಅಂತರಾಷ್ಟ್ರೀಯಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ...

ಆಸ್ಟ್ರೇಲಿಯಾದಲ್ಲಿ ಪ್ಯಾಲೆಸ್ತೀನ್ ಪರ ಬೃಹತ್ ಪ್ರತಿಭಟನೆ: ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದ ಲಕ್ಷಾಂತರ ಜನರು

- Advertisement -
- Advertisement -

ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಭಾನುವಾರ (ಆ.3) ಪ್ಯಾಲೆಸ್ತೀನ್ ಪರ ಅಥವಾ ಗಾಝಾ ಜನತೆಯ ಪರ ಬೃಹತ್ ಪ್ರತಿಭಟನೆ ನಡೆಯಿತು. ಲಕ್ಷಾಂತರ ಜನರು ಐತಿಹಾಸಿಕ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಿದರು.

ಆಸ್ಟ್ರೇಲಿಯಾದ ಸುಪ್ರೀಂ ಕೋರ್ಟ್ ಹಾರ್ಬರ್ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸಲು ಅನುಮತಿ ನೀಡಿದ ಮರು ದಿನವೇ ಈ ಬೃಹತ್ ಪ್ರತಿಭಟನೆ ನಡೆದಿದೆ. ಆಯೋಜಕರು ಸುಪ್ರೀಂ ಕೋರ್ಟ್‌ ಆದೇಶ ‘ಐತಿಹಾಸಿಕ’ ಎಂದು ಕರೆದಿದ್ದಾರೆ.

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಮೇಧ ಖಂಡಿಸಿ, ಗಾಝಾ ಜನತೆಗೆ ಆಹಾರ ಅಗತ್ಯ ಸಾಮಾಗ್ರಿಗಳು ಸಿಗದಂತೆ ದಿಗ್ಬಂಧನ ವಿಧಿಸಿರುವುದನ್ನು ವಿರೋಧಿಸಿ ರ್‍ಯಾಲಿ ಆಯೋಜಿಸಲಾಗಿತ್ತು.

ಸಿಡ್ನಿ ಹಾರ್ಬರ್ ಬ್ರಿಡ್ಜ್ ಮೇಲೆ ಕೊನೆಯದಾಗಿ 2023ರಲ್ಲಿ ಸುಮಾರು 50 ಸಾವಿರ ಜನರು ‘ವರ್ಲ್ಡ್ ಪ್ರೈಡ್‌’ ಮೆರವಣಿಗೆ ನಡೆಸಿದ್ದರು. ಆ ಬಳಿಕ ಬ್ರಿಡ್ಜ್ ಮೇಲೆ ರ್‍ಯಾಲಿ ನಡೆಸುವುದನ್ನು ನಿಷೇಧಿಸಲಾಗಿತ್ತು.

ಭಾನುವಾರ ಸಿಡ್ನಿಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಲೆಕ್ಕಿಸದೆ ಲಕ್ಷಾಂತರ ಜನರು ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವುದು ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕೆಲ ಮಾಧ್ಯಮ ವರದಿಗಳು ಬಣ್ಣಿಸಿವೆ.

ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆ. ಫೆಡರಲ್ ಎಂಪಿ ಎಡ್ ಹುಸಿಕ್ ಮತ್ತು ಮಾಜಿ ಎನ್‌ಎಸ್‌ಡಬ್ಲ್ಯೂ ಪ್ರೀಮಿಯರ್ ಬಾಬ್ ಕಾರ್ ಕೂಡ ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿರುವುದು ಗಮನಾರ್ಹ ಎಂದು ಬಿಬಿಸಿ ವರದಿ ಮಾಡಿದೆ.

“ಶೇಮ್ ಶೇಮ್ ಇಸ್ರೇಲ್, ಶೇಮ್ ಶೇಮ್ ಅಮೆರಿಕ”. “ನಮಗೆ ಗಾಝಾದಲ್ಲಿ ಕದನ ವಿರಾಮ ಬೇಕು, ಅದು ಯಾವಾಗ ಆಗುತ್ತದೆ?”. “ಫ್ರೀ ಪ್ಯಾಲೆಸ್ಟೈನ್” ಇತ್ಯಾದಿ ಘೋಷಣೆಗಳನ್ನು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನ ಸಮೂಹ ಕೂಗುತ್ತಿತ್ತು ಎಂದು ವರದಿಗಳು ಹೇಳಿವೆ.

ಜನರು ಕುಟುಂಬ ಸಮೇತರಾಗಿ, ತಮ್ಮ ಪುಟ್ಟ ಕಂದಮ್ಮಗಳೊಂದಿಗೆ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಲೆಕ್ ಬೆವಿಲ್ಲೆ ಎಂಬ ವ್ಯಕ್ತಿ,”ನಾವಿರೋದು ಭೂಮಿಯ ಇನ್ನೊಂದು ಬದಿ. ಗಾಝಾಕ್ಕಿಂತ ತುಂಬಾ ದೂರ ಎಂದು ನನಗೆ ಗೊತ್ತಿದೆ. ಆದರೆ, ಅಲ್ಲಿನ ಯುದ್ಧ ನಮ್ಮ ಮೇಲೂ ಪರಿಣಾಮ ಬೀರುತ್ತದೆ” ಎಂದಿದ್ದಾರೆ. ಅವರು ಗಾಝಾದ ಮಕ್ಕಳನ್ನು ತಮ್ಮ ಮೂರು ವರ್ಷದ ಮಗ ಫ್ರಾಂಕಿಗೆ ಹೋಲಿಸುತ್ತಾರೆ. ನಾವು ಇನ್ನೂ ಹೆಚ್ಚಿನ ಸಹಾಯ ಅವರಿಗೆ ಮಾಡಬಹುದು” ಎಂದಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಪ್ರತಿಭಟನಾ ರ್‍ಯಾಲಿ ಆರಂಭಗೊಂಡು ಎರಡು ಗಂಟೆಗಳ ನಂತರ ನ್ಯೂ ಸೌತ್ ವೇಲ್ (ಎನ್‌ಎಸ್‌ಡಬ್ಲ್ಯು) ಪೊಲೀಸರು ಒಂದು ಪಠ್ಯ ಸಂದೇಶ ಕಳುಹಿಸಿದರು. ಅದರಲ್ಲಿ, “ಆಯೋಜಕರೊಂದಿಗೆ ಸಮಾಲೋಚಿಸಿ, ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಮೆರವಣಿಗೆಯನ್ನು ನಿಲ್ಲಿಸಬೇಕಾಗಿದೆ ಮತ್ತು ಮುಂದಿನ ಸೂಚನೆಗಳಿಗಾಗಿ ಕಾಯಬೇಕಾಗಿದೆ” ಎಂದು ಬರೆಯಲಾಗಿತ್ತು.

ಸೇತುವೆಯ ಮೇಲಿದ್ದ ಪ್ರತಿಯೊಬ್ಬರೂ ಉತ್ತರಕ್ಕೆ ನಡೆಯುವುದನ್ನು ನಿಲ್ಲಿಸಿ ‘ನಿಯಂತ್ರಿತ’ ರೀತಿಯಲ್ಲಿ ನಗರದ ಕಡೆಗೆ ಹಿಂದಿರುಗಿ ಎಂದು ಅದರಲ್ಲಿ ಮನವಿ ಮಾಡಲಾಗಿತ್ತು ಎಂದು ವರದಿಗಳು ವಿವರಿಸಿವೆ.

ಪ್ರತಿಭಟನಾ ರ್‍ಯಾಲಿಯಲ್ಲಿ ಸುಮಾರು 90 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ಎನ್‌ಎಸ್‌ಡಬ್ಲ್ಯು ಪೊಲೀಸರು ಅಂದಾಜಿಸಿದ್ದಾರೆ. ಆದರೆ, ಪ್ರತಿಭಟನೆ ಆಯೋಜಸಿದ್ದ ‘ಪ್ಯಾಲೆಸ್ಟೈನ್ ಆಕ್ಷನ್ ಗ್ರೂಪ್ ಸಿಡ್ನಿ’ಯ ಫೇಸ್‌ಬುಕ್ ಪೋಸ್ಟ್‌ನಲ್ಲಿ ಸುಮಾರು 300,000 ಜನರು ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರತ್ತುಗಳೊಂದಿಗೆ ಫ್ರಾನ್ಸ್, ಕೆನಡಾ ಮತ್ತು ಯುಕೆ ಪ್ರತ್ಯೇಕವಾಗಿ ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಸ್ಥಾನಮಾನ ನೀಡಲು ಮುಂದಾಗಿವೆ. ಹಾಗಾಗಿ, ಆಸ್ಟ್ರೇಲಿಯಾ ಕೂಡ ಪ್ಯಾಲೆಸ್ತೀನ್‌ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲು ಆಗ್ರಹ ಹೆಚ್ಚಾಗಿದೆ.

ಇಸ್ರೇಲ್‌ನಿಂದ 22,000ಕ್ಕೂ ಹೆಚ್ಚು ನೆರವಿನ ಟ್ರಕ್‌ಗಳು ನಿರ್ಬಂಧ: ಗಾಜಾ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...