Homeಮುಖಪುಟಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

- Advertisement -
- Advertisement -

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದೆ.

ರಾಜ್ಯದ 389 ಸ್ಥಳಗಳಲ್ಲಿ ದಿನಗೂಲಿ ಕಾರ್ಮಿಕರು ಪ್ರತಿಭಟಿಸಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮಾಹಿತಿ ನೀಡಿದ್ದಾರೆ. ಚೆನ್ನೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕೇಂದ್ರದ ಕ್ರಮ ಮಹಾತ್ಮಾ ಗಾಂಧಿಯವರ ಪರಂಪರೆಯನ್ನು ನರೇಗಾದಿಂದ ಅಳಿಸಿಹಾಕುವ ಪ್ರಯತ್ನ ಎಂದು ಕಿಡಿಕಾರಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಡಿಎಂಕೆ ಅಧ್ಯಕ್ಷ ಕೆ. ವೀರಮಣಿ, ನರೇಗಾ ಯೋಜನೆಯ ಹೆಸರು ಬದಲಿಸಿರುವುದನ್ನು ಟೀಕಿಸಿದರು. ಶಾಸಕಾಂಗದ ಮೂಲಕ ಮಹಾತ್ಮ ಗಾಂಧಿಯವರ ಆದರ್ಶಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದರು. ಗಾಂಧಿಯನ್ನು ಜನರ ಹೃದಯದಿಂದ ತೆಗೆದುಹಾಕಲು ಸಾಧ್ಯವಿಲ್ಲ. ಅವರ ಆಲೋಚನೆಗಳು, ತತ್ವಗಳು ಮತ್ತು ತ್ಯಾಗಗಳು ಭಾರತೀಯ ಸಮಾಜದಲ್ಲಿ ಆಳವಾಗಿ ಹುದುಗಿವೆ” ಎಂದು ಹೇಳಿದರು.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದ ವೀರಮಣಿ, ವಿಶಾಲ ಸಂಘ ಪರಿವಾರದೊಳಗೆ ಭಿನ್ನಾಭಿಪ್ರಾಯಗಳಿವೆ ಎಂದು ಆರೋಪಿಸಿದರು. ಅವರು ನಾಟಕೀಯ ಜನರು. ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕತ್ವದ ನಡುವೆ ಶೀತಲ ಸಮರ ನಡೆಯುತ್ತಿದೆ. ನೀವು ಸಾಲುಗಳ ನಡುವೆ ಓದಬೇಕು. ಕೇಂದ್ರದಲ್ಲಿ ಆಡಳಿತ ನಡೆಸುವ ಸಂಸ್ಥೆಯೊಳಗೆ ಸೈದ್ಧಾಂತಿಕ ವಿರೋಧಾಭಾಸಗಳು ಹೊರಹೊಮ್ಮುತ್ತಿವೆ ಎಂದರು.

ದೇಶದ ಅತ್ಯಂತ ಮಹತ್ವದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿಸಿಕೆ ಮುಖ್ಯಸ್ಥ ಮತ್ತು ಸಂಸದ ತೋಲ್. ತಿರುಮಾವಲವನ್ ಆರೋಪಿಸಿದರು.

ಗಾಂಧಿ ಹೆಸರಿನ ಈ ಯೋಜನೆಯನ್ನು ನಿರ್ಮೂಲನೆ ಮಾಡಲು ಅಥವಾ ತೆಗೆದುಹಾಕಲು ಬಿಜೆಪಿ ಸರ್ಕಾರ ಸಿದ್ಧವಾಗಿದೆ. ಈ ಕಾರ್ಯಕ್ರಮವು ಗ್ರಾಮೀಣ ಬಡವರಿಗೆ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಭದ್ರತೆಯನ್ನು ಸಂಕೇತಿಸುತ್ತದೆ ಎಂದು ಹೇಳಿದರು.

ತಿರುಮಾವಲವನ್ ಅವರು ಈ ವಿಷಯದ ಬಗ್ಗೆ ತಮಿಳುನಾಡು ಸರ್ಕಾರದ ನಿಲುವಿಗೆ ತಮ್ಮ ಪಕ್ಷದ ಬೆಂಬಲವನ್ನು ಪುನರುಚ್ಚರಿಸಿದರು. ಕೇಂದ್ರದ ಕ್ರಮಗಳನ್ನು ಬೆಂಬಲಿಸುತ್ತಿರುವ ಎಐಎಡಿಎಂಕೆ ಮತ್ತು ಬಿಜೆಪಿಯನ್ನು ಖಂಡಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ತಮಿಳುನಾಡು ಸರ್ಕಾರವನ್ನು ನಾವು ಬೆಂಬಲಿಸುತ್ತೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...