Homeಕರ್ನಾಟಕಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

- Advertisement -
- Advertisement -

ಮಠದ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘ ಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಇದೇ ಸೆ.2ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿದೆ.

ಸೆಪ್ಟೆಂಬರ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದೆ. ಅದೇ ಹೊತ್ತಿಗೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆಯಲಿವೆ ಎಂದು ಸಂಘಟನೆಗಳು ತಿಳಿಸಿವೆ.

ದಲಿತ ಸಂಘಟನೆಗಳು, ವಿದ್ಯಾರ್ಥಿ ಯುವಜನ ಸಂಘಟನೆಗಳು, ಎಲ್ಲ ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರೈತ ಮತ್ತು ಕೃಷಿಕೂಲಿಕಾರರ ಸಂಘಟನೆಗಳು, ಅಲ್ಪಸಂಖ್ಯಾತರ ಸಂಘಟನೆಗಳು ನೌಕರರ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳು ವಕೀಲರ ಸಂಘಟನೆಗಳು, ಲೈಂಗಿಕ ಅಲ್ಪಸಂಖ್ಯಾತರು, ವಿವಿಧ ಗುಂಪುಗಳು ಮತ್ತು ಜೀವಪರ ವ್ಯಕ್ತಿಗಳ ಜಂಟಿ ನೇತೃತ್ವದಲ್ಲಿ ಮರುಘಾ ಮಠಾಧೀಶರ ಬಂಧನಕ್ಕೆ ಆಗ್ರಹಿಸಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಎಸ್‌.ಸಿ., ಎಸ್‌.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರು ಸೆಕ್ಷನ್‌ 164ರ ಅಡಿಯಲ್ಲಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಪೊಲೀಸ್‌ ಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಶಿಷ್ಟ ರೀತಿಯಲ್ಲಿ ಕಾನೂನು ಪಾಲನೆ ಮಾಡುವುದು ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘಟನೆಗಳು ಹೇಳಿವೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹೇಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. “ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ” ಎಂಬ ಆರೋಪಗಳು ಬಂದಿವೆ. ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತಾರೆಂಬ ಯಾವುದೇ ಖಚಿತ ಮಾಹಿತಿ ಇಲ್ಲ.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...