Homeಕರ್ನಾಟಕಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಸೆ.2ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

- Advertisement -
- Advertisement -

ಮಠದ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘ ಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಇದೇ ಸೆ.2ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿದೆ.

ಸೆಪ್ಟೆಂಬರ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದೆ. ಅದೇ ಹೊತ್ತಿಗೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆಯಲಿವೆ ಎಂದು ಸಂಘಟನೆಗಳು ತಿಳಿಸಿವೆ.

ದಲಿತ ಸಂಘಟನೆಗಳು, ವಿದ್ಯಾರ್ಥಿ ಯುವಜನ ಸಂಘಟನೆಗಳು, ಎಲ್ಲ ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರೈತ ಮತ್ತು ಕೃಷಿಕೂಲಿಕಾರರ ಸಂಘಟನೆಗಳು, ಅಲ್ಪಸಂಖ್ಯಾತರ ಸಂಘಟನೆಗಳು ನೌಕರರ ಸಂಘಟನೆಗಳು, ಸ್ವಯಂಸೇವಾ ಸಂಸ್ಥೆಗಳು ವಕೀಲರ ಸಂಘಟನೆಗಳು, ಲೈಂಗಿಕ ಅಲ್ಪಸಂಖ್ಯಾತರು, ವಿವಿಧ ಗುಂಪುಗಳು ಮತ್ತು ಜೀವಪರ ವ್ಯಕ್ತಿಗಳ ಜಂಟಿ ನೇತೃತ್ವದಲ್ಲಿ ಮರುಘಾ ಮಠಾಧೀಶರ ಬಂಧನಕ್ಕೆ ಆಗ್ರಹಿಸಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಹಾಗೂ ಎಸ್‌.ಸಿ., ಎಸ್‌.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರು ಸೆಕ್ಷನ್‌ 164ರ ಅಡಿಯಲ್ಲಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಪೊಲೀಸ್‌ ಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಶಿಷ್ಟ ರೀತಿಯಲ್ಲಿ ಕಾನೂನು ಪಾಲನೆ ಮಾಡುವುದು ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಘಟನೆಗಳು ಹೇಳಿವೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹೇಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. “ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ” ಎಂಬ ಆರೋಪಗಳು ಬಂದಿವೆ. ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತಾರೆಂಬ ಯಾವುದೇ ಖಚಿತ ಮಾಹಿತಿ ಇಲ್ಲ.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿಗಳು, ಪ್ರಾಮಾಣಿಕ ತನಿಖಾಧಿಕಾರಿಗಳು, ಸಾಮಾಜಿಕ-ಸಂಸ್ಥೆಗಳನ್ನೊಳಗೊಂಡ ‘ಎಸ್‌ಐಟಿ’ ಕೂಡಲೇ ರಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆಗ್ರಹಿಸಿದೆ.

ಮಂಗಳವಾರ ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಈಗಾಗಲೇ ಆರೋಪಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿ ನಾಲ್ಕು ದಿನ ಕಳೆದಿವೆ. ಆದರೆ, ಚಿತ್ರದುರ್ಗದಲ್ಲಿಯೇ ಇರುವ ಆರೋಪಿ ಸ್ವಾಮೀಜಿಯನ್ನು ಬಂಧಿಸಲು ವಿಳಂಬ ಮಾಡುತ್ತಾ ಸಾಕ್ಷ್ಯಧಾರಗಳ ನಾಶಕ್ಕೆ ಅವಕಾಶ ಮಾಡಿಕೊಡುತ್ತಿವೆ. ಮೊದಲು ಆರೋಪಿ ಮುರುಘ ಶರಣ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಸರ್ಕಾರ ಸ್ವಾಮೀಜಿಯ ರಕ್ಷಣೆಗೆ ನಿಂತಿರುವ ಅನುಮಾನ ಕಾಡುತ್ತಿದೆ. ಗೃಹ ಸಚಿವ ಅರಗಜ್ಞಾನೇಂದ್ರ ರಾಜೀನಾಮೆ ಕೊಡಬೇಕು. ಅವರು ಇಂತಹ ಮೂರ್ನಾಲ್ಕು ಪ್ರಕರಣಗಳಲ್ಲಿ ತಮ್ಮ ಹೇಳಿಕೆಗಳ ಮೂಲಕ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ದಸಂದ ಮೈಸೂರು ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ ಮಾತನಾಡಿ, “ಚಿತ್ರದುರ್ಗದ ಮುರುಘಾ ಮಠದ ಮೇಲೆ ನಮಗಿದ್ದ ಆಶಾ ಭಾವನೆಗೆ ಅಘಾತ ತಂದಿದೆ. ಕೂಡಲೇ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಯನ್ನು ಮೊದಲು ಜೈಲಿಗೆ ಕಳುಹಿಸಬೇಕು. ಇಲ್ಲವಾದರೆ ಗ್ರಾಮೀಣ ಪ್ರದೇಶಗಳಿಂದಲೇ ಹೋರಾಟ ನಡೆಸಲಾಗುವುದು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಮೊದಲು ಆರೋಪಿ ಸ್ವಾಮೀಜಿಯನ್ನು ಬಂಧಿಸಬೇಕು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...