Homeಮುಖಪುಟದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

ದೆಹಲಿಯಲ್ಲಿ ಕಾಂಗ್ರೆಸ್‌ನಿಂದ ಭಾರೀ ಪ್ರತಿಭಟನೆ: ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ವಶಕ್ಕೆ

- Advertisement -
- Advertisement -

ಏರುತ್ತಿರುವ ಬೆಲೆಗಳು, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್‌ ಪಕ್ಷದ ದೆಹಲಿ ಪ್ರಧಾನ ಕಚೇರಿಯ ಹೊರಗೆ ಪಕ್ಷವು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿದರು. ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಇಂದು ಮುಂದೂಡಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರು ಮತ್ತು ಹಿರಿಯ ನಾಯಕರು “ಪಿಎಂ ಹೌಸ್ ಘೇರಾವ್”ನಲ್ಲಿ ಭಾಗವಹಿಸಲು ಯೋಜಿಸಿದ್ದರಾದರೂ, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸಂಸತ್ತಿನಿಂದ “ಚಲೋ ರಾಷ್ಟ್ರಪತಿ ಭವನ” ನಡೆಸಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಕಳ್ಳಭಟ್ಟಿ ಮದ್ಯ ಕುಡಿದು 36 ಸಾವು: ಅಕ್ರಮ ದಂಧೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಕಾಂಗ್ರೆಸ್ ಮೆರವಣಿಗೆಗೆ ಮುಂಚಿತವಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಿ ಆಡಳಿತವು ನಿಷೇಧಾಜ್ಞೆಗಳನ್ನು ವಿಧಿಸಿತ್ತು. ಈ ನಿರ್ಬಂಧಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದರು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಪಕ್ಷದ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವಶಕ್ಕೆ ಪಡೆದಿದ್ದಾರೆ. ಅವರನ್ನು ದೆಹಲಿಯ ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ಪೊಲೀಸ್ ಲೈನ್ಸ್‌ನಲ್ಲಿ ಇರಿಸಲಾಗಿದೆ.

ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ, “ನಾವು ಪ್ರಜಾಪ್ರಭುತ್ವದ ಸಾವಿಗೆ ಸಾಕ್ಷಿಯಾಗಿದ್ದೇವೆ. ಸುಮಾರು ಒಂದು ಶತಮಾನದ ಹಿಂದಿನಿಂದ ನಿರಂತರವಾಗಿ ಕಟ್ಟುತ್ತಾ ಬಂದಿರುವ ಭಾರತವು ನಿಮ್ಮ ಕಣ್ಣುಗಳ ಮುಂದೆ ನಾಶವಾಗುತ್ತಿದೆ. ಇದರ ವಿರುದ್ಧ ನಿಂತಿರುವವರ ವಿರುದ್ಧ ಸರ್ವಾಧಿಕಾರವು ಕ್ರೂರವಾಗಿ ದಾಳಿ ಮಾಡುತ್ತಿದೆ, ಜೈಲಿಗೆ ಹಾಕುತ್ತಿದೆ, ಬಂಧಿಸುತ್ತಿದೆ ಮತ್ತು ಥಳಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಂಗ್ ಇಂಡಿಯನ್ ಕಚೇರಿಗೆ ಇಡಿ ಸೀಲ್: ‘ನೀವು ಏನು ಬೇಕಾದರೂ ಮಾಡಿ; ಮೋದಿಗೆ ಹೆದರುವುದಿಲ್ಲ’ ಎಂದ ರಾಹುಲ್ ಗಾಂಧಿ

ಬೆಲೆ ಏರಿಕೆ, ನಿರುದ್ಯೋಗ ಮತ್ತು ಸಮಾಜದಲ್ಲಿನ ಹಿಂಸಾಚಾರದಂತಹ ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಬಾರದು ಎಂಬುದು ಸರ್ಕಾರದ ಏಕೈಕ ಅಜೆಂಡಾ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದೆ. ಈ ವಿಷಯಗಳ ಕುರಿತು ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....