Homeಮುಖಪುಟಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಸಂಚಾರವನ್ನು ನಿಷೇಧಿಸುವ ಉದ್ದೇಶದಿಂದ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯ ಗವರ್ನರ್ ಆಚಾರ್ಯ ದೇವವ್ರತ್‌ ಅವರು, “ನಗರ ಪ್ರದೇಶಗಳಲ್ಲಿ ಗುಜರಾತ್ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ”ಯನ್ನು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಹೇಳಿದ್ದರು. ಇದಾಗಿ ಕೆಲವು ದಿನಗಳ ನಂತರ ಮಸೂದೆ ಹಿಂಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರು ಸೆಪ್ಟೆಂಬರ್ 17 ರಂದು ಮಸೂದೆಯನ್ನು ಹಿಂತಿರುಗಿಸಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ನಿಮಾ ಆಚಾರ್ಯ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಸಂದೇಶವನ್ನು ಓದಿದ ಅವರು, “ರಾಜ್ಯಪಾಲರು ತಮ್ಮ ಸಂದೇಶದಲ್ಲಿ ಮಸೂದೆಯ ವಿರುದ್ಧ ಮಾಲ್ಧಾರಿ (ಪಶು ಪಾಲಕರು) ಸಮುದಾಯದ ಪ್ರತಿನಿಧಿಗಳ ಮನವಿಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

“ಪಶುಪಾಲನೆ ಸಮುದಾಯದ ಜೀವನದ ಭಾಗವಾಗಿದೆ. ಆದ್ದರಿಂದ, ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಪಾಲರು ಮರುಪರಿಶೀಲನೆಗಾಗಿ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಮಸೂದೆಯನ್ನು ಹಿಂದಿರುಗಿಸುತ್ತಿದ್ದಾರೆ” ಸ್ಪೀಕರ್‌‌ ಅವರು ರಾಜ್ಯಪಾಲರ ಸಂದೇಶವನ್ನು ಓದುತ್ತಾ ಹೇಳಿದ್ದಾರೆ.

ಜಾನುವಾರುಗಳನ್ನು ವಶಪಡಿಸಿಕೊಳ್ಳುವ ವಿಧಾನ ಮತ್ತು ಮಸೂದೆಯಲ್ಲಿ ವಿಧಿಸಲಾದ ಭಾರಿ ದಂಡವನ್ನು ಮಾಲ್ಧಾರಿ ಸಮುದಾಯವು ವಿರೋಧಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮಸೂದೆಯ ಪ್ರಕಾರ, ನಗರ ಮತ್ತು ಪಟ್ಟಣಗಳಲ್ಲಿ ಜಾನುವಾರುಗಳನ್ನು ಸಾಕುವವರು  ಬಿಡಾಡಿ ಹಸುಗಳು ಮತ್ತು ಹೋರಿಗಳಂತಹ ಪ್ರಾಣಿಗಳನ್ನು ಸಾಕಲು ಪರವಾನಗಿಯನ್ನು ಪಡೆಯಬೇಕು. ಅವುಗಳಿಗೆ ಟ್ಯಾಗ್ ಮಾಡಬೇಕು. ಇದನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಎಪಿಎಂಸಿ-ಭೂ ಸುಧಾರಣೆ-ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಬುಧವಾರದಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನೋದ್ ಮೊರಾಡಿಯಾ ಅವರು ಮಸೂದೆಯನ್ನು ಹಿಂಪಡೆಯುವ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಮಸೂದೆಯನ್ನು ಅಂಗೀಕರಿಸಿದ ನಂತರ ರಾಜ್ಯದಾದ್ಯಂತ ಮಾಲ್ಧಾರಿ ಸಮುದಾಯದಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಇದರ ನಂತರ ಎಪ್ರೀಲ್‌ನಲ್ಲಿ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು ಮಸೂದೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಮನವಿ ಮಾಡಿದ್ದೇನೆ ಎಂದು ಸಮುದಾಯಕ್ಕೆ ಭರವಸೆ ನೀಡಿದ್ದರು.

ಅಲ್ಲದೆ, ಸರ್ಕಾರದ ವಕ್ತಾರ ಜಿತು ವಘಾನಿ ಅವರು ಮಸೂದೆಯನ್ನು ಜಾರಿಗೊಳಿಸದಿರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಆಗಸ್ಟ್‌ನಲ್ಲಿ ಹೈಕೋರ್ಟ್‌ ಮಸೂದೆಯ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವನ್ನು ಕೇಳಿತ್ತು. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿಯ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಇತರ ನಗರ ನಾಗರಿಕ ಸಂಸ್ಥೆಗಳಿಗೆ ನಿರಂತರವಾಗಿ ಕೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....