Homeಮುಖಪುಟಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಸಂಚಾರವನ್ನು ನಿಷೇಧಿಸುವ ಉದ್ದೇಶದಿಂದ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯ ಗವರ್ನರ್ ಆಚಾರ್ಯ ದೇವವ್ರತ್‌ ಅವರು, “ನಗರ ಪ್ರದೇಶಗಳಲ್ಲಿ ಗುಜರಾತ್ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ”ಯನ್ನು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಹೇಳಿದ್ದರು. ಇದಾಗಿ ಕೆಲವು ದಿನಗಳ ನಂತರ ಮಸೂದೆ ಹಿಂಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರು ಸೆಪ್ಟೆಂಬರ್ 17 ರಂದು ಮಸೂದೆಯನ್ನು ಹಿಂತಿರುಗಿಸಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ನಿಮಾ ಆಚಾರ್ಯ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಸಂದೇಶವನ್ನು ಓದಿದ ಅವರು, “ರಾಜ್ಯಪಾಲರು ತಮ್ಮ ಸಂದೇಶದಲ್ಲಿ ಮಸೂದೆಯ ವಿರುದ್ಧ ಮಾಲ್ಧಾರಿ (ಪಶು ಪಾಲಕರು) ಸಮುದಾಯದ ಪ್ರತಿನಿಧಿಗಳ ಮನವಿಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

“ಪಶುಪಾಲನೆ ಸಮುದಾಯದ ಜೀವನದ ಭಾಗವಾಗಿದೆ. ಆದ್ದರಿಂದ, ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಪಾಲರು ಮರುಪರಿಶೀಲನೆಗಾಗಿ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಮಸೂದೆಯನ್ನು ಹಿಂದಿರುಗಿಸುತ್ತಿದ್ದಾರೆ” ಸ್ಪೀಕರ್‌‌ ಅವರು ರಾಜ್ಯಪಾಲರ ಸಂದೇಶವನ್ನು ಓದುತ್ತಾ ಹೇಳಿದ್ದಾರೆ.

ಜಾನುವಾರುಗಳನ್ನು ವಶಪಡಿಸಿಕೊಳ್ಳುವ ವಿಧಾನ ಮತ್ತು ಮಸೂದೆಯಲ್ಲಿ ವಿಧಿಸಲಾದ ಭಾರಿ ದಂಡವನ್ನು ಮಾಲ್ಧಾರಿ ಸಮುದಾಯವು ವಿರೋಧಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮಸೂದೆಯ ಪ್ರಕಾರ, ನಗರ ಮತ್ತು ಪಟ್ಟಣಗಳಲ್ಲಿ ಜಾನುವಾರುಗಳನ್ನು ಸಾಕುವವರು  ಬಿಡಾಡಿ ಹಸುಗಳು ಮತ್ತು ಹೋರಿಗಳಂತಹ ಪ್ರಾಣಿಗಳನ್ನು ಸಾಕಲು ಪರವಾನಗಿಯನ್ನು ಪಡೆಯಬೇಕು. ಅವುಗಳಿಗೆ ಟ್ಯಾಗ್ ಮಾಡಬೇಕು. ಇದನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಎಪಿಎಂಸಿ-ಭೂ ಸುಧಾರಣೆ-ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಬುಧವಾರದಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನೋದ್ ಮೊರಾಡಿಯಾ ಅವರು ಮಸೂದೆಯನ್ನು ಹಿಂಪಡೆಯುವ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಮಸೂದೆಯನ್ನು ಅಂಗೀಕರಿಸಿದ ನಂತರ ರಾಜ್ಯದಾದ್ಯಂತ ಮಾಲ್ಧಾರಿ ಸಮುದಾಯದಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಇದರ ನಂತರ ಎಪ್ರೀಲ್‌ನಲ್ಲಿ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು ಮಸೂದೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಮನವಿ ಮಾಡಿದ್ದೇನೆ ಎಂದು ಸಮುದಾಯಕ್ಕೆ ಭರವಸೆ ನೀಡಿದ್ದರು.

ಅಲ್ಲದೆ, ಸರ್ಕಾರದ ವಕ್ತಾರ ಜಿತು ವಘಾನಿ ಅವರು ಮಸೂದೆಯನ್ನು ಜಾರಿಗೊಳಿಸದಿರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಆಗಸ್ಟ್‌ನಲ್ಲಿ ಹೈಕೋರ್ಟ್‌ ಮಸೂದೆಯ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವನ್ನು ಕೇಳಿತ್ತು. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿಯ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಇತರ ನಗರ ನಾಗರಿಕ ಸಂಸ್ಥೆಗಳಿಗೆ ನಿರಂತರವಾಗಿ ಕೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...