Homeಮುಖಪುಟಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಸಂಚಾರವನ್ನು ನಿಷೇಧಿಸುವ ಉದ್ದೇಶದಿಂದ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯ ಗವರ್ನರ್ ಆಚಾರ್ಯ ದೇವವ್ರತ್‌ ಅವರು, “ನಗರ ಪ್ರದೇಶಗಳಲ್ಲಿ ಗುಜರಾತ್ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ”ಯನ್ನು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಹೇಳಿದ್ದರು. ಇದಾಗಿ ಕೆಲವು ದಿನಗಳ ನಂತರ ಮಸೂದೆ ಹಿಂಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರು ಸೆಪ್ಟೆಂಬರ್ 17 ರಂದು ಮಸೂದೆಯನ್ನು ಹಿಂತಿರುಗಿಸಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ನಿಮಾ ಆಚಾರ್ಯ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಸಂದೇಶವನ್ನು ಓದಿದ ಅವರು, “ರಾಜ್ಯಪಾಲರು ತಮ್ಮ ಸಂದೇಶದಲ್ಲಿ ಮಸೂದೆಯ ವಿರುದ್ಧ ಮಾಲ್ಧಾರಿ (ಪಶು ಪಾಲಕರು) ಸಮುದಾಯದ ಪ್ರತಿನಿಧಿಗಳ ಮನವಿಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

“ಪಶುಪಾಲನೆ ಸಮುದಾಯದ ಜೀವನದ ಭಾಗವಾಗಿದೆ. ಆದ್ದರಿಂದ, ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಪಾಲರು ಮರುಪರಿಶೀಲನೆಗಾಗಿ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಮಸೂದೆಯನ್ನು ಹಿಂದಿರುಗಿಸುತ್ತಿದ್ದಾರೆ” ಸ್ಪೀಕರ್‌‌ ಅವರು ರಾಜ್ಯಪಾಲರ ಸಂದೇಶವನ್ನು ಓದುತ್ತಾ ಹೇಳಿದ್ದಾರೆ.

ಜಾನುವಾರುಗಳನ್ನು ವಶಪಡಿಸಿಕೊಳ್ಳುವ ವಿಧಾನ ಮತ್ತು ಮಸೂದೆಯಲ್ಲಿ ವಿಧಿಸಲಾದ ಭಾರಿ ದಂಡವನ್ನು ಮಾಲ್ಧಾರಿ ಸಮುದಾಯವು ವಿರೋಧಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮಸೂದೆಯ ಪ್ರಕಾರ, ನಗರ ಮತ್ತು ಪಟ್ಟಣಗಳಲ್ಲಿ ಜಾನುವಾರುಗಳನ್ನು ಸಾಕುವವರು  ಬಿಡಾಡಿ ಹಸುಗಳು ಮತ್ತು ಹೋರಿಗಳಂತಹ ಪ್ರಾಣಿಗಳನ್ನು ಸಾಕಲು ಪರವಾನಗಿಯನ್ನು ಪಡೆಯಬೇಕು. ಅವುಗಳಿಗೆ ಟ್ಯಾಗ್ ಮಾಡಬೇಕು. ಇದನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಎಪಿಎಂಸಿ-ಭೂ ಸುಧಾರಣೆ-ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಬುಧವಾರದಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನೋದ್ ಮೊರಾಡಿಯಾ ಅವರು ಮಸೂದೆಯನ್ನು ಹಿಂಪಡೆಯುವ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಮಸೂದೆಯನ್ನು ಅಂಗೀಕರಿಸಿದ ನಂತರ ರಾಜ್ಯದಾದ್ಯಂತ ಮಾಲ್ಧಾರಿ ಸಮುದಾಯದಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಇದರ ನಂತರ ಎಪ್ರೀಲ್‌ನಲ್ಲಿ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು ಮಸೂದೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಮನವಿ ಮಾಡಿದ್ದೇನೆ ಎಂದು ಸಮುದಾಯಕ್ಕೆ ಭರವಸೆ ನೀಡಿದ್ದರು.

ಅಲ್ಲದೆ, ಸರ್ಕಾರದ ವಕ್ತಾರ ಜಿತು ವಘಾನಿ ಅವರು ಮಸೂದೆಯನ್ನು ಜಾರಿಗೊಳಿಸದಿರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಆಗಸ್ಟ್‌ನಲ್ಲಿ ಹೈಕೋರ್ಟ್‌ ಮಸೂದೆಯ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವನ್ನು ಕೇಳಿತ್ತು. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿಯ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಇತರ ನಗರ ನಾಗರಿಕ ಸಂಸ್ಥೆಗಳಿಗೆ ನಿರಂತರವಾಗಿ ಕೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....