Homeಮುಖಪುಟಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

ಪ್ರತಿಭಟನೆ ಪರಿಣಾಮ: ಗೋವು ನಿಯಂತ್ರಣ ಮಸೂದೆಯನ್ನು ಹಿಂಪಡೆದ ಗುಜರಾತ್ ಸರ್ಕಾರ

- Advertisement -
- Advertisement -

ಗುಜರಾತ್‌ನಾದ್ಯಂತ ನಡೆದ ಹೈನುಗಾರಿಕೆ ನಡೆಸುವ ಸಮುದಾಯದ ಪ್ರತಿಭಟನೆಯ ನಂತರ ರಾಜ್ಯ ವಿಧಾನಸಭೆಯು ಗೋವು ನಿಯಂತ್ರಣ ಮಸೂದೆಯನ್ನು ಸರ್ವಾನುಮತದಿಂದ ಹಿಂಪಡೆದಿದೆ. ಸುಮಾರು ಐದು ತಿಂಗಳ ಹಿಂದೆ ರಾಜ್ಯದ ನಗರ ಪ್ರದೇಶಗಳ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಸಂಚಾರವನ್ನು ನಿಷೇಧಿಸುವ ಉದ್ದೇಶದಿಂದ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.

ರಾಜ್ಯ ಗವರ್ನರ್ ಆಚಾರ್ಯ ದೇವವ್ರತ್‌ ಅವರು, “ನಗರ ಪ್ರದೇಶಗಳಲ್ಲಿ ಗುಜರಾತ್ ಜಾನುವಾರು ನಿಯಂತ್ರಣ (ಕೀಪಿಂಗ್ ಮತ್ತು ಮೂವಿಂಗ್) ಮಸೂದೆ”ಯನ್ನು ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಹೇಳಿದ್ದರು. ಇದಾಗಿ ಕೆಲವು ದಿನಗಳ ನಂತರ ಮಸೂದೆ ಹಿಂಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರು ಸೆಪ್ಟೆಂಬರ್ 17 ರಂದು ಮಸೂದೆಯನ್ನು ಹಿಂತಿರುಗಿಸಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ನಿಮಾ ಆಚಾರ್ಯ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಸಂದೇಶವನ್ನು ಓದಿದ ಅವರು, “ರಾಜ್ಯಪಾಲರು ತಮ್ಮ ಸಂದೇಶದಲ್ಲಿ ಮಸೂದೆಯ ವಿರುದ್ಧ ಮಾಲ್ಧಾರಿ (ಪಶು ಪಾಲಕರು) ಸಮುದಾಯದ ಪ್ರತಿನಿಧಿಗಳ ಮನವಿಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

“ಪಶುಪಾಲನೆ ಸಮುದಾಯದ ಜೀವನದ ಭಾಗವಾಗಿದೆ. ಆದ್ದರಿಂದ, ಅವರ ಮನವಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಪಾಲರು ಮರುಪರಿಶೀಲನೆಗಾಗಿ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡಲು ಮಸೂದೆಯನ್ನು ಹಿಂದಿರುಗಿಸುತ್ತಿದ್ದಾರೆ” ಸ್ಪೀಕರ್‌‌ ಅವರು ರಾಜ್ಯಪಾಲರ ಸಂದೇಶವನ್ನು ಓದುತ್ತಾ ಹೇಳಿದ್ದಾರೆ.

ಜಾನುವಾರುಗಳನ್ನು ವಶಪಡಿಸಿಕೊಳ್ಳುವ ವಿಧಾನ ಮತ್ತು ಮಸೂದೆಯಲ್ಲಿ ವಿಧಿಸಲಾದ ಭಾರಿ ದಂಡವನ್ನು ಮಾಲ್ಧಾರಿ ಸಮುದಾಯವು ವಿರೋಧಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಸ್ಪೀಕರ್‌ ಹೇಳಿದ್ದಾರೆ.

ಮಸೂದೆಯ ಪ್ರಕಾರ, ನಗರ ಮತ್ತು ಪಟ್ಟಣಗಳಲ್ಲಿ ಜಾನುವಾರುಗಳನ್ನು ಸಾಕುವವರು  ಬಿಡಾಡಿ ಹಸುಗಳು ಮತ್ತು ಹೋರಿಗಳಂತಹ ಪ್ರಾಣಿಗಳನ್ನು ಸಾಕಲು ಪರವಾನಗಿಯನ್ನು ಪಡೆಯಬೇಕು. ಅವುಗಳಿಗೆ ಟ್ಯಾಗ್ ಮಾಡಬೇಕು. ಇದನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಎಪಿಎಂಸಿ-ಭೂ ಸುಧಾರಣೆ-ಜಾನುವಾರು ಹತ್ಯೆ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಬುಧವಾರದಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನೋದ್ ಮೊರಾಡಿಯಾ ಅವರು ಮಸೂದೆಯನ್ನು ಹಿಂಪಡೆಯುವ ಪ್ರಸ್ತಾಪವನ್ನು ಮಂಡಿಸಿದ್ದಾರೆ.

ಮಸೂದೆಯನ್ನು ಅಂಗೀಕರಿಸಿದ ನಂತರ ರಾಜ್ಯದಾದ್ಯಂತ ಮಾಲ್ಧಾರಿ ಸಮುದಾಯದಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಇದರ ನಂತರ ಎಪ್ರೀಲ್‌ನಲ್ಲಿ ಗುಜರಾತ್ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು ಮಸೂದೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ಗೆ ಮನವಿ ಮಾಡಿದ್ದೇನೆ ಎಂದು ಸಮುದಾಯಕ್ಕೆ ಭರವಸೆ ನೀಡಿದ್ದರು.

ಅಲ್ಲದೆ, ಸರ್ಕಾರದ ವಕ್ತಾರ ಜಿತು ವಘಾನಿ ಅವರು ಮಸೂದೆಯನ್ನು ಜಾರಿಗೊಳಿಸದಿರಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಆಗಸ್ಟ್‌ನಲ್ಲಿ ಹೈಕೋರ್ಟ್‌ ಮಸೂದೆಯ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವನ್ನು ಕೇಳಿತ್ತು. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿಯ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಇತರ ನಗರ ನಾಗರಿಕ ಸಂಸ್ಥೆಗಳಿಗೆ ನಿರಂತರವಾಗಿ ಕೇಳುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...