HomeUncategorizedಕೊಪ್ಪ: ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

ಕೊಪ್ಪ: ಇಬ್ಬರು ಬಾಲಕಿಯರ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಕೊಪ್ಪ: ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಸರಣಿ ಸಾವುಗಳಿಗೆ ಸಮಗ್ರ ತನಿಖೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು (ಜುಲೈ 7) ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಈ ಪ್ರತಿಭಟನೆಗೆ ಕರ್ನಾಟಕ ಜನಶಕ್ತಿಯು ಬೆಂಬಲವನ್ನು ವ್ಯಕ್ತಪಡಿಸಿತ್ತು.

ಸರಣಿ ಸಾವಿನ ಸುತ್ತ ಅನುಮಾನದ ಹುತ್ತ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ಬೊಮ್ಲಾಪುರ ಗ್ರಾಮದ ಶಮಿತಾ (14) ಜೂನ್ 29ರ ಭಾನುವಾರ ಶವವಾಗಿ ಪತ್ತೆಯಾಗಿದ್ದರು. ಆರಂಭದಲ್ಲಿ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ, ಸಣ್ಣ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ವಾದ ಸಾರ್ವಜನಿಕರಲ್ಲಿ ಭಾರೀ ಅನುಮಾನ ಮೂಡಿಸಿತ್ತು. ಈ ಅನುಮಾನಕ್ಕೆ ಮತ್ತಷ್ಟು ಬಲ ಸಿಕ್ಕಿದ್ದು, ಇದೇ ಶಾಲೆಯಲ್ಲಿ 2023ರ ಜುಲೈ 27ರಂದು ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ ಎಂಬ 14 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಗಮನಾರ್ಹವೆಂದರೆ, ಇಬ್ಬರೂ ಬಾಲಕಿಯರ ಶವ ಒಂದೇ ಜಾಗದಲ್ಲಿ ಪತ್ತೆಯಾಗಿವೆ.

ಶಾಸಕ ಟಿ.ಡಿ. ರಾಜೇಗೌಡ ಅವರು ಈ ದುರಂತಗಳ ಬಗ್ಗೆ ಸಾರ್ವಜನಿಕರಲ್ಲಿರುವ ಅನುಮಾನವನ್ನು ಹಂಚಿಕೊಂಡು, “ಬಾಲಕಿಯ ಸಾವಿನ ಸಮಗ್ರ ತನಿಖೆಯಾಗಬೇಕು ಎನ್ನುವ ಉದ್ದೇಶದಿಂದಲೇ ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. ವರದಿ ಬಂದ ಕೂಡಲೇ ಪ್ರಾಮಾಣಿಕ ತನಿಖೆ ಮಾಡಿಸಲಾಗುವುದು. ವಸತಿ ಶಾಲೆಯಲ್ಲಿ ಎಲ್ಲಾ ಅಧಿಕಾರಿ, ಪೋಷಕರನ್ನು ಕರೆಯಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿಸಲಾಗುವುದು” ಎಂದು ಭರವಸೆ ನೀಡಿದ್ದರು.

ಪ್ರತಿಭಟನಾ ಮೆರವಣಿಗೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭಿಸಲಾಗಿತ್ತು. ಕೊಪ್ಪ ಟೌನ್‌ಹಾಲ್‌ನಿಂದ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು. ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೃತ ಬಾಲಕಿಯರ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಹೋರಾಟಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಪ್ರಗತಿಪರ ಸಂಘಟನೆಗಳ ಸಂಘಟಕರು ಮನವಿ ಮಾಡಿದ್ದರು.

ಪ್ರಮುಖ ಬೇಡಿಕೆಗಳು ಮತ್ತು ಎಚ್ಚರಿಕೆ: ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಹಾಗೂ ಹೋರಾಟಗಾರ ಕೆ.ಎಲ್. ಅಶೋಕ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, “ಈ ಸಾವುಗಳು ಇಲ್ಲಿಗೆ ನಿಲ್ಲಬೇಕು. ಮಕ್ಕಳ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರಿರುವ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸಿಬ್ಬಂದಿಗಳನ್ನು ಈ ಕೂಡಲೇ ಅಮಾನತುಗೊಳಿಸಿ, ಅವರ ವಿರುದ್ಧ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು. ಅಲ್ಲದೆ, “ಇಲ್ಲವಾದಲ್ಲಿ, ಕರ್ನಾಟಕ ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS), ಮಹಿಳಾ ಮುನ್ನಡೆ, ಕರ್ನಾಟಕ ಶ್ರಮಿಕ ಶಕ್ತಿ ಸೇರಿದಂತೆ ಹಲವು ಸಂಘಟನೆಗಳು ಸೇರಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತೇವೆ” ಎಂದು ಕಠಿಣ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮಾತನಾಡಿದ ವಕೀಲರಾದ ಸುಧೀರ್ ಕುಮಾರ್ ಮೂರೋಳ್ಳಿ, “ಎಲ್ಲಾ ಸಂಘಟನೆಗಳು ಸೇರಿ ಮಾಡುತ್ತಿರುವ ಈ ಹೋರಾಟ ತುಂಬಾ ಸ್ವಾಗತಾರ್ಹವಾದುದು. ಈ ಸಾವುಗಳಿಗೆ ಖಂಡಿತ ನ್ಯಾಯ ಸಿಗುತ್ತದೆ” ಎಂಬ ಭರವಸೆಯ ನುಡಿಗಳನ್ನಾಡಿದರು.

ಶಮಿತಾಳ ಚಿಕ್ಕಮ್ಮ ರಾಜೀವಿ ಅವರು ದುಃಖಿತರಾಗಿ, “ಯಾವುದೇ ಕಾರಣಕ್ಕೂ ಇದನ್ನು ಆತ್ಮಹತ್ಯೆ ಎಂದು ಕರೆಯಬೇಡಿ” ಎಂದು ಆಗ್ರಹಿಸಿ, “ಇಷ್ಟು ವರ್ಷ ಆದರೂ ಶಾಲೆಯ ಅವ್ಯವಸ್ಥೆಗಳನ್ನು ಯಾಕೆ ಸರಿಪಡಿಸಲಿಲ್ಲ? ಇಲಾಖೆ ಏನು ಮಾಡುತ್ತಿದೆ?” ಎಂದು ಪ್ರಶ್ನಿಸಿದರು.

KVS ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಮುಖಂಡ ರಾಜಿತ್ ಮಾತನಾಡಿ, “ಈ ಸಾವಿನ ಬಗ್ಗೆ ನಮ್ಮ ಸಂಘಟನೆ ಗಂಭೀರವಾಗಿ ಪರಿಗಣಿಸಿದ್ದು, ಈ ಅನುಮಾನಾಸ್ಪದ ಸಾವಿಗೆ ನ್ಯಾಯ ಸಿಗುವವರೆಗೂ ಅವರ ಪೋಷಕರ ಜೊತೆಗೆ ನಿಲ್ಲುತ್ತದೆ” ಎಂದು ಪ್ರತಿಜ್ಞೆ ಮಾಡಿದರು.

ಈ ಸಭೆಯಲ್ಲಿ ಮಹಿಳಾ ಮುನ್ನಡೆಯ ರಾಧಾ ಹಾಗಲಗಂಚಿ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗಡಿಕಲ್, ದಲಿತ ಮುಖಂಡರಾದ ರಾಜಾ ಶಂಕರ್, ಕುಂಚೂರ್ ವಾಸು, ರವೀಂದ್ರ ಮೊದಲಾದವರು ಮಾತನಾಡಿ, ಬಾಲಕಿಯರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಆನಂದ್ ಬೆಳಗೊಳ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಈ ಬೃಹತ್ ಪ್ರತಿಭಟನೆ, ಶಾಲಾ ವಸತಿ ನಿಲಯಗಳಲ್ಲಿನ ಸುರಕ್ಷತೆಯ ಬಗ್ಗೆ ಮತ್ತು ಶಿಕ್ಷಣ ಇಲಾಖೆಯ ಮೇಲ್ವಿಚಾರಣೆಯ ವೈಫಲ್ಯಗಳ ಬಗ್ಗೆ ಸಾರ್ವಜನಿಕರ ಆಳವಾದ ಕಳವಳವನ್ನು ಪ್ರತಿಬಿಂಬಿಸುತ್ತದೆ. ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂಬುದರ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ಕೊಪ್ಪ| ಬಾಲಕಿ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...