Homeಮುಖಪುಟಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

ಮೋದಿ ಸರ್ಕಾರದ ವಿರುದ್ಧ ಲಡಾಖ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಮಾತು ಮರೆತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಜನಾಕ್ರೋಶ ಭುಗಿಲೆದ್ದಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು. ಅಲ್ಲಿನ ಪರಿಸರವನ್ನು ಗಣಿ, ಕೈಗಾರಿಕೆ ಮಾಫಿಯಾಗಳಿಂದ ಕಾಪಾಡಬೇಕು, ಆರನೇ ಪರಿಚ್ಛೇದದ ಮಾನ್ಯತೆ ನೀಡಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಡಿ ನಾಡಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಮಾರ್ಚ್ 24 ರಂದು ಪರಿಸರ ಕಾರ್ಯಕರ್ತ ಮತ್ತು ರಾಮನ್ ಮ್ಯಾಗ್ಸಾಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ.

ಚೀನಾ ಜೊತೆಗಿನ ಗಡಿ ಸಂಘರ್ಷ ಶಮನಕ್ಕೆ ಸಂಬಂಧಪಟ್ಟಂತೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಆರಂಭದಲ್ಲಿ ಮೂರನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಆ ನಂತರ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಆಯಕಟ್ಟಿನ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕೇಂದ್ರ ಗೃಹ ಸಚಿವಾಲಯವು 2019 ರಲ್ಲಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಬಳಿಕ ಲಡಾಖ್‌ಗೆ ಸಾಂವಿಧಾನಿಕ ಸುರಕ್ಷತೆಗಳನ್ನು ನೀಡಬೇಕು ಎಂಬ ಅಲ್ಲಿನ ಜನರ ಬೇಡಿಕೆಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದೆ.

‘ದಿ ವೈರ್‌’ನೊಂದಿಗೆ ಮಾತನಾಡಿರುವ ಲಡಾಖ್‌ನಿಂದ 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೆಡಿಎ ಸದಸ್ಯ ಸಜ್ಜದ್ ಹುಸೇನ್, ಲಡಾಖ್‌ಗೆ ಸಂವಿಧಾನ 6ನೇ ಶೆಡ್ಯೂಲ್‌ ಸ್ಥಾನಮಾನ ನೀಡುವುದು ಮತ್ತು ರಾಜ್ಯದ ಸ್ಥಾನಮಾನ ನೀಡುವ ನಮ್ಮ ಬೇಡಿಕೆಗಳನ್ನು ಈಡೇರಿಸುವ ಕೇಂದ್ರದೊಂದಿಗಿನ ಮಾತುಕತೆಗಳು ವಿಫಲವಾದ ಕಾರಣ ಮಾರ್ಚ್ 24 ರಿಂದ ಮಾರ್ಚ್ 27 ರವರೆಗೆ ನಾವು ವಾಂಗ್‌ಚುಕ್‌ ಅವರ ಉಪವಾಸ ಸತ್ಯಾಗ್ರಹದ ಜೊತೆ ಸೇರಿಕೊಳ್ಳುತ್ತೇವೆ ಎಂದಿದ್ದಾರೆ.

“ರಾಜ್ಯದ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಲಡಾಖಿಗಳ ಹೃದಯಕ್ಕೆ ಸಾಮಿಪ್ಯ ಇರುವ ವಿಷಯಗಳು. ಇದು ಕೇವಲ ನಮ್ಮ ಬೇಡಿಕೆಯಲ್ಲ. ಇದು ಲಡಾಖ್ ಜನರ ಭಾವನೆ ಮತ್ತು ಆಕಾಂಕ್ಷೆಯಾಗಿದೆ. ನಾವು ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ” ಎಂದು ಪ್ರಮುಖ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಹುಸೇನ್ ಹೇಳಿದ್ದಾರೆ.

ಕಳೆದ 15 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್‌ಗೆ ಬೆಂಬಲವಾಗಿ ಕೆಡಿಎ ಅರ್ಧ ದಿನದ ಬಂದ್ ಕರೆ ನೀಡಿದ ನಂತರ ಮಾರ್ಚ್ 20 ರಂದು ಬುಧವಾರ ಕಾರ್ಗಿಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಲಡಾಖ್‌ನ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾರ್ಗಿಲ್‌ನ ಮುಖ್ಯ ಮಾರುಕಟ್ಟೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್‌ ಅವರ ಪ್ರಮುಖ ಬೇಡಿಕೆಯಾಗಿತ್ತು. ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವದ ಮರುಸ್ಥಾಪನೆ ಎಂದು ಅಲ್ಲಿನ ಜನರು ಹೇಳಿದ್ದಾರೆ.

ಕೆಡಿಎಯ ಸಹ ಸಂಚಾಲಕ ಮತ್ತು ಜಮ್ಮು ಕಾಶ್ಮೀರದ ಮಾಜಿ ಶಾಸಕ ಅಸ್ಗರ್ ಅಲಿ ಕರ್ಬಲೈ ಅವರು ಫಾತಿಮಾ ಚೌಕ್‌ನಿಂದ ಕಾರ್ಗಿಲ್‌ನ ಹುಸೇನಿ ಪಾರ್ಕ್‌ವರೆಗೆ ರ್‍ಯಾಲಿಯನ್ನು ಮುನ್ನಡೆಸಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮಾತುಕತೆ ವಿಫಲಗೊಂಡ ಬಳಿಕ ಕರ್ಬಲೈ ಅವರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.

“ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿದೆ. ಲಡಾಖ್‌ ಜನರ ಧ್ವನಿಯನ್ನು ಬಲ ಪ್ರಯೋಗ ಮಾಡಿ ಹತ್ತಿಕ್ಕಬಹುದು ಎಂದು ಕೇಂದ್ರ ಸರ್ಕಾರ ಅಂದುಕೊಂಡಿದೆ. ಆದರೆ, ಲಡಾಖ್‌ನ ಜನರು ತಮ್ಮ ಹಕ್ಕುಗಳಿಗಾಗಿ ಹೋರಾಟದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದರಿದ್ದಾರೆ” ಎಂದು ಕರ್ಬಲೈ ಹೇಳಿದ್ದಾರೆ.

ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಯಾಕೆ? 

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಪರಿಸರ ಹೋರಾಟಗಾರ ವಾಂಗ್‌ಚುಕ್ ಅವರು ಮಾರ್ಚ್ 6ರಿಂದ ಕೇವಲ ನೀರು ಮತ್ತು ಉಪ್ಪು ಸೇವಿಸುತ್ತಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮುಂದೆ ಲಡಾಖ್‌ನಲ್ಲಿ ಗಣಿಗಾರಿಕೆ, ಕೈಗಾರಿಕೆ ಸ್ಥಾಪನೆಯಾದೆ ಪರಿಸರಕ್ಕೆ ಉಂಟಾಗಲಿರುವ ಅತೀವ ಹಾನಿಯ ಕುರಿತು ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

2019ರ ಸಂಸತ್ತಿನ ಚುನಾವಣೆ ಮತ್ತು 2020ರ ಜಮ್ಮು ಕಾಶ್ಮೀರದ ಹಿಲ್ ಕೌನ್ಸಿಲ್ ಚುನಾವಣೆಗಳಿಗೆ ಮುಂಚಿತವಾಗಿ ತನ್ನ ಚುನಾವಣಾ ಪ್ರಣಾಳಿಕೆಗಳಲ್ಲಿ ಲಡಾಖ್ ಜನರಿಗೆ ನೀಡಿದ್ದ ಭರವಸೆಗಳನ್ನು ವಾಂಗ್‌ಚುಕ್ ಅವರು ವಿಡಿಯೋ ಸಂದೇಶ ಮೂಲಕ ಬಿಜೆಪಿ ನಾಯಕರಿಗೆ ನೆನಪಿಸುವ ಕೆಲಸ ಮಾಡಿದ್ದಾರೆ.

“ಈ ಸರ್ಕಾರವು ಭಾರತವನ್ನು ‘ಪ್ರಜಾಪ್ರಭುತ್ವದ ತಾಯಿ’ ಎಂದು ಕರೆಯುತ್ತದೆ. ಆದರೆ, ಭಾರತವು ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಇತ್ತೀಚಿನ ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಲಡಾಖ್‌ಗೆ 6ರನೇ ಶೆಡ್ಯೂಲ್‌ಗಾಗಿ ಜನಾಂದೋಲನ (People’s Movement for Sixth Schedule for Ladakh) ಎಂಬ ಬ್ಯಾನರ್‌ನಡಿಯಲ್ಲಿ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವ ವಾಂಗ್‌ಚುಕ್ ಅವರು, ಇಡೀ ದೇಶಕ್ಕೆ ಲಡಾಖ್‌ನ ವಾಸ್ತವತೆಯನ್ನು ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲಡಾಖ್‌ನ ಕುರುಬರು, ರೈತರು ಸೇರಿದಂತೆ ಬರೋಬ್ಬರಿ 10 ಸಾವಿರಕ್ಕೂ ಅಧಿಕ ಜನರು ವಾಂಗ್‌ಚುಕ್ ಅವರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ದಕ್ಷಿಣ ಭಾರತದ ಕೈಗಾರಿಗಳು ಮತ್ತು ಚೀನಾದ ಆಕ್ರಮಣದಿಂದ ಲಡಾಖ್‌ ಅನ್ನು ರಕ್ಷಿಸಿ ಎಂಬುವುದು ಈ ಜನರ ಕೂಗಾಗಿದೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ.

ಇದನ್ನೂ ಓದಿ : ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...