Homeಕರ್ನಾಟಕಬೆಂಗಳೂರು: ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಾಳೆ ಬೃಹತ್ ಸಮಾವೇಶ

ಬೆಂಗಳೂರು: ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಾಳೆ ಬೃಹತ್ ಸಮಾವೇಶ

- Advertisement -
- Advertisement -

ಜಸ್ಟಿಸ್‌ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಾಳೆ (ಫೆಬ್ರುವರಿ 14) ಬೃಹತ್ ಸಮಾವೇಶವನ್ನು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಮ್ಮಿಕೊಂಡಿದೆ.

“ಡಿಸೆಂಬರ್‌ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 64 ದಿನಗಳಿಂದ ಹೋರಾಟ ನಡೆಯುತ್ತಿದ್ದು, 65ನೇ ದಿನಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಭೋವಿ, ಲಂಬಾಣಿ ಸಮುದಾಯಗಳನ್ನು ಹೊರತುಪಡಿಸಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿನ ಉಳಿದ ಎಲ್ಲಾ ಸಮುದಾಯಗಳು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿವೆ. ಸಾವಿರಾರು ಜನ ಸೇರಲಿದ್ದಾರೆ” ಎಂದು ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯ ಸಮುದಾಯಗಳು ಒಂದಾಗಿವೆ ಎಂಬ ದೊಡ್ಡ ಸಂದೇಶವನ್ನು ನಾಳಿನ ಸಮಾವೇಶ ನೀಡುತ್ತಿದೆ. ಸಮಗಾರ, ಮೋಚಿ, ಡೋಹಾರ (ತ್ರಿಮಸ್ಥ) ಸಮುದಾಯದ ಮುಖಂಡರು ನಾಳಿನ ಸಮಾವೇಶದಲ್ಲಿ ಮಾತನಾಡಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಕೇವಲ ಎರಡು ಜಾತಿಗಳು ಒಳಮೀಸಲಾತಿಗಾಗಿ ಹೋರಾಡುತ್ತಿವೆ ಎಂಬ ತಪ್ಪು ಕಲ್ಪನೆ ರವಾನೆಯಾಗಿತ್ತು. ಆದರೆ ಈ ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಎಲ್ಲ ಅಸ್ಪೃಶ್ಯ ಜಾತಿಗಳು ಈಗ ಒಳಮೀಸಲಾತಿಗೆ ಆಗ್ರಹಿಸುತ್ತಿರುವುದು ದೊಡ್ಡ ಬದಲಾವಣೆ. ಇದು ಖುಷಿಯ ಸಂಗತಿ. ಒಳಮೀಸಲಾತಿ ಜಾರಿಯಾಗುವುದಕ್ಕಿಂತ ಹೆಚ್ಚಿನ ಖುಷಿ ಈ ಅಸ್ಪೃಶ್ಯ ಸಮುದಾಯಗಳ ಒಗ್ಗಟ್ಟಿನಿಂದ ಸಿಕ್ಕಿದೆ. ಇದೊಂದು ದೊಡ್ಡ ಯಶಸ್ಸು” ಎಂದು ಬಣ್ಣಿಸಿದರು.

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಕೇಂದ್ರ ಸರ್ಕಾರವು ಅನುಚ್ಛೇದ 341(3)ಕ್ಕೆ ಕೂಡಲೇ ತಿದ್ದುಪಡಿ ಮಾಡಬೇಕು ಎಂದು ನಾಳಿನ ಸಮಾವೇಶ ಆಗ್ರಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತ್ರಿಮತಸ್ಥರಿಗೆ (ಮೋಚಿ, ಡೋಹಾರ, ಸಮಗಾರ) ಅಭಿವೃದ್ಧಿ ನಿಗಮವನ್ನು ಕೂಡಲೇ ಸ್ಥಾಪಿಸಬೇಕು. ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿಯನ್ನು ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರ ಕಾರ್ಮಿಕರು ಮತ್ತು ವಾಹನ ಚಾಲಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ನ್ಯಾ. ಎ.ಜೆ. ಸದಾಶಿವ ಆಯೋಗದ ಪರ ಹೋರಾಟಗಾರರ ಮೇಲೆ ಹೂಡಿದ ರೌಡಿಶೀಟರ್ ಪ್ರಕರಣಗಳನ್ನು ರದ್ದುಪಡಿಸಬೇಕು. ದಲಿತ ಸಂಘಟಕರ ಮೇಲೆ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬೇಕು. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ ಅನುದಾನವನ್ನು ಒಳಮೀಸಲಾತಿ ಅನ್ವಯ 6 + 5+1+ 3 ಸೂತ್ರದಂತೆ ಹಂಚಿಕೆ ಮಾಡಬೇಕು. ಅನುದಾನ ದುರುಪಯೋಗಕ್ಕೆ ಕಾರಣವಾದ 7(D) ಯನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...