Homeಮುಖಪುಟಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

ಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ಕಡೆ ರೈತರ ಪ್ರತಿಭಟನೆ, ಬಿಜೆಪಿ ವಿರುದ್ಧದ ಅಭಿಯಾನಗಳು ನಡೆಯುತ್ತಿರುವ ಮಧ್ಯೆ ಉತ್ತರ ಭಾರತದ ಶೀತ ಮರುಭೂಮಿಯಾದ ಲಡಾಖ್‌ನ ರಾಜಧಾನಿ ಲೇಹ್‌ನಲ್ಲಿ ಮೈ ಕೊರೆವ ಚಳಿಯ ಮಧ್ಯೆ ಬಹುತೇಕ ಬುಡಕಟ್ಟು ಪ್ರತಿಭಟನಾಕಾರರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ತಮ್ಮ ಭೂಮಿಯನ್ನು ಆಕ್ರಮಿಸಿಕೊಂಡಿರುವ ಚೀನಾದ ವಿರುದ್ಧ ಲಡಾಖ್‌ನ ಜನರು ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮೌನವಾಗಿದ್ದಾರೆ, ಭಾರತ ಸರ್ಕಾರ ಮೌನವಾಗಿದೆ ಮತ್ತು ಭಾರತದ ಮಾಧ್ಯಮಗಳು ಚೀನಾ 2,000 ಚದರ ಕಿಮೀ ಭಾರತದ ಭೂಮಿಯನ್ನು ಕಬಳಿಸಿದರೂ ಮೌನವಾಗಿವೆ.

ಲಡಾಖ್‌ನಲ್ಲಿರುವ ಲೇಹ್‌ನಲ್ಲಿ, ಹದಿಹರೆಯದವರಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸೇರಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಬಿಜೆಪಿಯು, ಈ ಹಿಂದಿನ ಚುನಾವಣೆ ವೇಳೆ ನೀಡಿದ್ದ ಪ್ರಮುಖ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ, ನಮ್ಮ ಭೂಭಾಗದ ಆಕ್ರಮಣ ನಡೆಯುತ್ತಿದೆ ಎಂದು ಸಾವಿರಾರು ಮಂದಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಲಡಾಖ್‌ ಆಡಳಿತವು ಈ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಚೀನಾದಿಂದ ಭಾರತದ ಭೂಭಾಗದ ಆಕ್ರಮಣ ಮಾಡಲಾಗಿದೆ ಮತ್ತು ದಕ್ಷಿಣದಲ್ಲಿ ಕಾರ್ಪೊರೇಟ್‌ಗಳಿಂದ ಸಾವಿರಾರು ಚದರ ಕಿಲೋಮೀಟರ್‌ಗಳಷ್ಟು ಭೂಮಿಗಳ ಆಕ್ರಮಣ ನಡೆದಿದೆ. ಚಾಂಗ್ಪಾ ಅಲೆಮಾರಿ ಬುಡಕಟ್ಟು ಜನಾಂಗದವರ ದುಃಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಲಡಾಖ್‌ ಜನರ ಬೇಡಿಕೆಯೇನು?

ಲಡಾಖ್‌ಗೆ ರಾಜ್ಯ ಸ್ಥಾನಮಾನ, ಲಡಾಖ್‌ನ್ನು ಆರನೇ ಶೆಡ್ಯೂಲ್‌ಗೆ ಸೇರಿಸುವುದು, ಲಡಾಖ್‌ನ ಸ್ಥಳೀಯರಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಸಂಸದೀಯ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಲಾಗಿದೆ.

ಗಡಿ ಜಾಥಾ ರದ್ದುಗೊಳಿಸಿದ ವಾಂಗ್ಚುಕ್‌

ಲಡಾಖ್‌ನಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಚೀನಾದಿಂದ ಭಾರತದ ಭೂಭಾಗಗಳ ಆಕ್ರಮಣಗಳು ಮತ್ತು ಭಾರತೀಯ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಲಡಾಖ್‌ನ ಸಾವಿರಾರು ಎಕರೆ ಪಶುಪಾಲನಾ ಹುಲ್ಲುಗಾವಲು ಭೂಮಿಯನ್ನು  ನೀಡಿರುವುದನ್ನು, ಅಲ್ಲಿನ ಬುಡಕಟ್ಟು ಜನರಿಂದ ಭೂಮಿಯನ್ನು ಕಿತ್ತುಕೊಂಡಿರುವುದನ್ನು ಖಂಡಿಸಿ ವಾಂಗ್‌ಚುಕ್ ಏಪ್ರಿಲ್ 7ರಂದು ಚೀನಾ ಗಡಿಯಲ್ಲಿರುವ ಚಾಂಗ್‌ಥಾಂಗ್ ಪ್ರದೇಶಕ್ಕೆ ಮೆರವಣಿಗೆಯನ್ನು ಘೋಷಿಸಿದ್ದರು. ವಾಂಗ್ಚುಕ್‌ಗೆ ಅಪೆಕ್ಸ್ ಬಾಡಿ, ಲೇಹ್ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಸಂಘಟನೆಗಳು ಬೆಂಬಲವನ್ನು ಘೋಷಿಸಿದ್ದವು.

ಲಡಾಖ್ ಆಡಳಿತವು ಕಲಂ 144ರಡಿ ನಿಷೇಧಾಜ್ಞೆಯನ್ನು ಹೇರುವ ಮೂಲಕ ಜಾಥಾಕ್ಕೆ ಅನುಮತಿಯನ್ನು ನಿರಾಕರಿಸಿದ ಮತ್ತು ಪ್ರದೇಶದಲ್ಲಿ ಇಂಟರ್ ನೆಟ್‌ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಲಡಾಖ್ ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ ಚುಕ್ ಅವರು ರವಿವಾರ ನಡೆಸಲು ಉದ್ದೇಶಿಸಿದ್ದ ತನ್ನ ಗಡಿ ಜಾಥಾವನ್ನು ರದ್ದುಗೊಳಿಸಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಅದರ ಸೇರ್ಪಡೆಗಾಗಿ ಹೋರಾಡುತ್ತಿರುವ ವಾಂಗ್ಚುಕ್, ಸರಕಾರದ ‘ಅತಿರೇಕದ ಕ್ರಮಗಳು’ ಘರ್ಷಣೆಗಳು ಮತ್ತು ದಂಗೆಗಳಿಗೆ ಕಾರಣವಾಗಬಹುದು. ಈ ಶಾಂತಿಯುತ ಪ್ರತಿಭಟನೆಯನ್ನು ಬುಡಮೇಲುಗೊಳಿಸಲು ಪ್ರಯತ್ನಗಳು ನಡೆಯಬಹುದು ಮತ್ತು ಬಳಿಕ ಹಿಂಸಾಚಾರಕ್ಕಾಗಿ ಪ್ರತಿಭಟನೆಯನ್ನು ದೂಷಿಸಬಹುದು ಹಾಗೂ ಲಡಾಖ್ ನಲ್ಲಿ ಶಾಂತಿಯುತ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಲು ಅದನ್ನು ನೆಪವಾಗಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...