Homeಮುಖಪುಟಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

ಚೀನಾದಿಂದ ಭಾರತದ ಭೂಭಾಗದ ಆಕ್ರಮಣ: ಮೈ ಕೊರೆವ ಚಳಿಯನ್ನು ಲೆಕ್ಕಿಸದೆ ಲಡಾಖ್‌ನಲ್ಲಿ ಬೃಹತ್‌ ಪ್ರತಿಭಟನೆ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ಕಡೆ ರೈತರ ಪ್ರತಿಭಟನೆ, ಬಿಜೆಪಿ ವಿರುದ್ಧದ ಅಭಿಯಾನಗಳು ನಡೆಯುತ್ತಿರುವ ಮಧ್ಯೆ ಉತ್ತರ ಭಾರತದ ಶೀತ ಮರುಭೂಮಿಯಾದ ಲಡಾಖ್‌ನ ರಾಜಧಾನಿ ಲೇಹ್‌ನಲ್ಲಿ ಮೈ ಕೊರೆವ ಚಳಿಯ ಮಧ್ಯೆ ಬಹುತೇಕ ಬುಡಕಟ್ಟು ಪ್ರತಿಭಟನಾಕಾರರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ತಮ್ಮ ಭೂಮಿಯನ್ನು ಆಕ್ರಮಿಸಿಕೊಂಡಿರುವ ಚೀನಾದ ವಿರುದ್ಧ ಲಡಾಖ್‌ನ ಜನರು ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮೌನವಾಗಿದ್ದಾರೆ, ಭಾರತ ಸರ್ಕಾರ ಮೌನವಾಗಿದೆ ಮತ್ತು ಭಾರತದ ಮಾಧ್ಯಮಗಳು ಚೀನಾ 2,000 ಚದರ ಕಿಮೀ ಭಾರತದ ಭೂಮಿಯನ್ನು ಕಬಳಿಸಿದರೂ ಮೌನವಾಗಿವೆ.

ಲಡಾಖ್‌ನಲ್ಲಿರುವ ಲೇಹ್‌ನಲ್ಲಿ, ಹದಿಹರೆಯದವರಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸೇರಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಬಿಜೆಪಿಯು, ಈ ಹಿಂದಿನ ಚುನಾವಣೆ ವೇಳೆ ನೀಡಿದ್ದ ಪ್ರಮುಖ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ, ನಮ್ಮ ಭೂಭಾಗದ ಆಕ್ರಮಣ ನಡೆಯುತ್ತಿದೆ ಎಂದು ಸಾವಿರಾರು ಮಂದಿ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆ ಲಡಾಖ್‌ ಆಡಳಿತವು ಈ ಪ್ರದೇಶದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಚೀನಾದಿಂದ ಭಾರತದ ಭೂಭಾಗದ ಆಕ್ರಮಣ ಮಾಡಲಾಗಿದೆ ಮತ್ತು ದಕ್ಷಿಣದಲ್ಲಿ ಕಾರ್ಪೊರೇಟ್‌ಗಳಿಂದ ಸಾವಿರಾರು ಚದರ ಕಿಲೋಮೀಟರ್‌ಗಳಷ್ಟು ಭೂಮಿಗಳ ಆಕ್ರಮಣ ನಡೆದಿದೆ. ಚಾಂಗ್ಪಾ ಅಲೆಮಾರಿ ಬುಡಕಟ್ಟು ಜನಾಂಗದವರ ದುಃಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಲಡಾಖ್‌ ಜನರ ಬೇಡಿಕೆಯೇನು?

ಲಡಾಖ್‌ಗೆ ರಾಜ್ಯ ಸ್ಥಾನಮಾನ, ಲಡಾಖ್‌ನ್ನು ಆರನೇ ಶೆಡ್ಯೂಲ್‌ಗೆ ಸೇರಿಸುವುದು, ಲಡಾಖ್‌ನ ಸ್ಥಳೀಯರಿಗೆ ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಸಂಸದೀಯ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಲಾಗಿದೆ.

ಗಡಿ ಜಾಥಾ ರದ್ದುಗೊಳಿಸಿದ ವಾಂಗ್ಚುಕ್‌

ಲಡಾಖ್‌ನಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. ಚೀನಾದಿಂದ ಭಾರತದ ಭೂಭಾಗಗಳ ಆಕ್ರಮಣಗಳು ಮತ್ತು ಭಾರತೀಯ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಲಡಾಖ್‌ನ ಸಾವಿರಾರು ಎಕರೆ ಪಶುಪಾಲನಾ ಹುಲ್ಲುಗಾವಲು ಭೂಮಿಯನ್ನು  ನೀಡಿರುವುದನ್ನು, ಅಲ್ಲಿನ ಬುಡಕಟ್ಟು ಜನರಿಂದ ಭೂಮಿಯನ್ನು ಕಿತ್ತುಕೊಂಡಿರುವುದನ್ನು ಖಂಡಿಸಿ ವಾಂಗ್‌ಚುಕ್ ಏಪ್ರಿಲ್ 7ರಂದು ಚೀನಾ ಗಡಿಯಲ್ಲಿರುವ ಚಾಂಗ್‌ಥಾಂಗ್ ಪ್ರದೇಶಕ್ಕೆ ಮೆರವಣಿಗೆಯನ್ನು ಘೋಷಿಸಿದ್ದರು. ವಾಂಗ್ಚುಕ್‌ಗೆ ಅಪೆಕ್ಸ್ ಬಾಡಿ, ಲೇಹ್ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಸಂಘಟನೆಗಳು ಬೆಂಬಲವನ್ನು ಘೋಷಿಸಿದ್ದವು.

ಲಡಾಖ್ ಆಡಳಿತವು ಕಲಂ 144ರಡಿ ನಿಷೇಧಾಜ್ಞೆಯನ್ನು ಹೇರುವ ಮೂಲಕ ಜಾಥಾಕ್ಕೆ ಅನುಮತಿಯನ್ನು ನಿರಾಕರಿಸಿದ ಮತ್ತು ಪ್ರದೇಶದಲ್ಲಿ ಇಂಟರ್ ನೆಟ್‌ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಲಡಾಖ್ ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ ಚುಕ್ ಅವರು ರವಿವಾರ ನಡೆಸಲು ಉದ್ದೇಶಿಸಿದ್ದ ತನ್ನ ಗಡಿ ಜಾಥಾವನ್ನು ರದ್ದುಗೊಳಿಸಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಅದರ ಸೇರ್ಪಡೆಗಾಗಿ ಹೋರಾಡುತ್ತಿರುವ ವಾಂಗ್ಚುಕ್, ಸರಕಾರದ ‘ಅತಿರೇಕದ ಕ್ರಮಗಳು’ ಘರ್ಷಣೆಗಳು ಮತ್ತು ದಂಗೆಗಳಿಗೆ ಕಾರಣವಾಗಬಹುದು. ಈ ಶಾಂತಿಯುತ ಪ್ರತಿಭಟನೆಯನ್ನು ಬುಡಮೇಲುಗೊಳಿಸಲು ಪ್ರಯತ್ನಗಳು ನಡೆಯಬಹುದು ಮತ್ತು ಬಳಿಕ ಹಿಂಸಾಚಾರಕ್ಕಾಗಿ ಪ್ರತಿಭಟನೆಯನ್ನು ದೂಷಿಸಬಹುದು ಹಾಗೂ ಲಡಾಖ್ ನಲ್ಲಿ ಶಾಂತಿಯುತ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಲು ಅದನ್ನು ನೆಪವಾಗಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಎನ್‌ಐಎ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯರಿಗೆ ಹಿಂಸಿಸಿದ್ದಾರೆ: ಮಮತಾ ಬ್ಯಾನರ್ಜಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...