Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...