Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...