Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...