Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...