Homeಮುಖಪುಟಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

ಸರ್ಕಾರದ ಕ್ರೌರ್ಯವನ್ನು ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾನನ್ನು ಬಂಧಿಸಬೇಕು. ಸಚಿವ ಸ್ಥಾನದಿಂದ ಅಜಯ್‌‌ ಮಿಶ್ರಾರನ್ನು ಕಿತ್ತೊಗೆಯಬೇಕು ಎಂದು ಆಗ್ರಹಸಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ರವರು ಸ್ವಲ್ಪವು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ಇವರಿಬ್ಬರೂ ಬಂಡವಾಳಶಾಹಿಗಳ ಬೂಟು ನೆಕ್ಕುತ್ತಿದ್ದಾರೆ. ಹಾಗಾಗಿಯೇ ಪ್ರತಿನಿತ್ಯ ರೈತರ ಕೊಲೆಯಾಗುತ್ತಿದೆ” ಎಂದು ಕಿಡಿಕಾರಿದರು.

ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮಕ್ಕೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಈ ಘಟನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಉತ್ತರಪ್ರದೇಶ ಸರ್ಕಾರದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕವು ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಮನವಿಯನ್ನೂ ಕಳಿಸಿದೆ.

ಘಟನೆಯಲ್ಲಿ ನಾಲ್ವರು ರೈತರು ಹತ್ಯೆಯಾಗಿದ್ದಾರೆ. ಇನ್ನೂ ಹಲವು ರೈತ ನಾಯಕರು ಮತ್ತು ಪ್ರತಿಭಟನಾ ನಿರತ ರೈತರು ಗಂಭೀರ ಸ್ವರೂಪದಲ್ಲಿ ಘಾಯಗೊಳಿಸಿರುವ ಹೀನಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಪ್ರತಿಭಟನಾಕಾರರು ಅಗ್ರಹಿಸಿದ್ಧಾರೆ.

ಇತ್ತೀಚೆಗೆ, ಸಚಿವ ಸಚಿವ ಅಜಯ್ ಮಿಶ್ರಾ ತೆನಿ ಅವರು ರೈತರ ಪ್ರತಿಭಟನೆಯ ಕುರಿತು ಬಹಿರಂಗ ಬೆದರಿಕೆ ಹಾಕಿದ್ದರು. ಅವರ ಬೆದರಿಕೆಯನ್ನು ಖಂಚಿಸಿ, ಅವರು ಪ್ರತಿನಿಧಿಸುವ ಕ್ಷೇತ್ರವಾದ ಲಖೀಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಚಿವರ ಬೆಂಗಾವಲು ಪಡೆಯ ವಾಹನ ಹರಿಸುವ ಮೂಲಕ ತಮ್ಮ ಬೆದರಿಕೆಯನ್ನು ಸಚಿವ ಸತ್ಯಗೊಳಿಸಿದ್ದಾರೆ. ಈ ಕೃತ್ಯ ಭಾರತದ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆಯ ಹಕ್ಕಿನ ತೀವ್ರ ಉಲ್ಲಂಘನೆಯೂ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ಧಾರೆ.

ಈ ಘಟನೆ ನಡೆದ ನಂತರವೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಹತ್ಯೆಯಾದ, ಗಾಯಗೊಂಡ ರೈತರನ್ನು ಅಥವಾ ಅವರ ಕುಟುಂಬಗಳನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲೀ ನೀಡಿಲ್ಲ. ಇದು ಹಾಡುಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಇಂತಹ ಗಂಭೀರ ಪ್ರಕರಣದ ಸಂದರ್ಭದಲ್ಲಿ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಬೇಕು.  ಉತ್ತರ ಪ್ರದೇಶದ ಸರ್ಕಾರ ಮತ್ತು ಹಿಂಸೆಗೆ ಕಾರಣರಾದ ಸಚಿವರ ಮೇಲೆ ಕೂಡಲೇ ಕ್ರಮಕೂಗೊಳ್ಳುವ ಭರವಸೆ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ರೈತ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಿಪಿಎಂ ಸಂಘಟನೆಯ ವರಲಕ್ಷ್ಮಿ, ವಿಮಲ ಮುಂತಾದವರು ಭಾಗವಹಿಸಿದ್ದರು.

ವಿಡಿಯೋ ನೋಡಿ


ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...