Homeಕರ್ನಾಟಕನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ಬೀರುವಿನಲ್ಲಿ ಸಿಕ್ಕ ವೋಟರ್ ಐಡಿ ಮತ್ತು 2015ರಲ್ಲಿ ಕಾಲುವೆಯಲ್ಲಿ ಸಿಕ್ಕಿದ್ದ ಅಪರಿಚಿತ ಶವ ಮರ್ಯಾದೆಗೇಡು ಹತ್ಯೆಯಾಗಿರುವುದನ್ನು ದೃಢಪಡಿಸುತ್ತವೆ.

- Advertisement -
- Advertisement -

ಮಂಡ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳು, ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿವೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವಿಚಿತ್ರ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮೇಘನ ಎಂಬ ಹುಡುಗಿಯ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿ, ದೂರು ನೀಡಿದ್ದಾರೆ. ಆದರೆ ಪೊಲೀಸರು ಈ ವಿಷಯದಲ್ಲಿ ಸೂಕ್ತ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದಿವೆ.

ಘಟನೆಯ ಹಿನ್ನೆಲೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೇಘನಾ ಎಂಬ ಹುಡುಗಿಯ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ಎಂಇಟಿ ಕಾಲೇಜಿನಲ್ಲಿ 2014-15 ರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತರ ಮೂಲಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸವರ್ಣಿಯ ಸಮುದಾಯಕ್ಕೆ ಸೇರಿದ ಟಿ.ಕೆ ಸ್ವಾಮಿ ಎಂಬುವವರ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ತದನಂತರ ಅವರಿಬ್ಬರೂ ಮದುವೆಯಾಗಿರುವುದಾಗಿಯೂ, ಆ ಮನೆಯವರಿಗೆ ತನ್ನ ಜಾತಿ ಗೊತ್ತಿರಲಿಲ್ಲ. ಈಗ ಗೊತ್ತಾಗಿ ತನಗೆ ತೊಂದರೆ ಕೊಡುತ್ತಿದ್ದಾರೆ. ಆದರೆ ತಾನು ಮನೆಗೆ ಬರುವುದಿಲ್ಲವೆಂದು ಮೇಘನಾ ಆಕೆಯ ತಾಯಿಗೆ ತಿಳಿಸಿ ನಾಪತ್ತೆಯಾಗಿದ್ದಳು. 5 ವರ್ಷದಿಂದ ಯಾವುದೇ ಸಂಪರ್ಕವಿರಲಿಲ್ಲ ಎಂದು ಆಕೆಯ ತಾಯಿ ಹೇಳಿದ್ದರು.

ಆದರೆ ಇತ್ತೀಚೆಗೆ ಅಕ್ಟೋಬರ್ 14 ರಂದು ಮೇಘನಾರವರ ತಾಯಿ ಮನೆ ಸ್ವಚ್ಛಗೊಳಿಸುತ್ತಿರುವಾಗ ಹಳೆಯ ಬೀರುವಿನಲ್ಲಿ ಟಿ.ಕೆ ಸ್ವಾಮಿಯ ವೋಟರ್ ಐಡಿ ಪತ್ತೆಯಾಗಿದೆ. ಅದರ ಆಧಾರದಲ್ಲಿ ತಿರುಮಲಾಪುರಕ್ಕೆ ತೆರಳಿ ವಿಚಾರಿಸಿದರೆ, ನಿಮ್ಮ ಮಗಳನ್ನು ಸ್ವಾಮಿ ಮನೆಯವರು 5 ವರ್ಷಗಳ ಹಿಂದೆಯೇ ಹತ್ಯೆ ಮಾಡಿದ್ದಾರೆ ಸ್ಥಳೀಯರು ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತಗೊಂಡ ತಾಯಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಹಳೆಯ ಅನುಮಾನಾಸ್ಪದ ಸಾವುಗಳು ಮತ್ತು ಪತ್ತೆಯಾಗದ ಶವಗಳ ದಾಖಲೆ ತೆಗೆದು ಪರಿಶೀಲಿಸಿದಾಗ 2015ರಲ್ಲಿ ಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತನ್ನ ಮಗಳು ಎಂದು ಮೇಘನಾ ತಾಯಿಯು ಗುರುತಿಸಿದ್ದಾರೆ. 2015 ರಲ್ಲಿ ಚಿನಕುರಳಿ ಪಕ್ಕದ ಬ್ಯಾಟರಾಯನಪುರ ನಾಲೆಯಲ್ಲಿ ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ. ಅದನ್ನು ಕೊಲೆ ಎಂದು ಪೊಲೀಸರು ಮಹಜರು ಮಾಡಿದ್ದಾರೆ.

ಹುಡುಗಿ ಮತ್ತು ಹುಡುಗ ಅನ್ಯಜಾತಿಗೆ ಸೇರಿದ್ದರಿಂದ ಹುಡುಗನ ಕುಟುಂಬದವರು ಆಕೆಯನ್ನು ಕೊಂದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಮೃತ ಮೇಘನಾಳ ತಾಯಿಯು ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ, ಬದಲಾಗಿ 5 ವರ್ಷ ಏನು ಮಾಡುತ್ತಿದ್ದೀರಿ? ನಿಮ್ಮ ಮಗಳು ಮದುವೆಯಾಗಿರುವುದಕ್ಕೆ ಸಾಕ್ಷಿ ಏನು? ನಾವು ಆರೋಪಿಗಳನ್ನು ಬಂಧಿಸುವುದಿಲ್ಲ, ಏಕೆಂದರೆ ಅವರು ಲಾಕಪ್ ಡೆತ್ ಆದರೆ ಯಾರು ಹೊಣೆ ಎಂದು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡುರವರು ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “ಸಂತ್ರಸ್ತಳ ತಾಯಿ ದೂರು ನೀಡಿ 15 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ. ನೊಂದವರಿಗೆ ರಕ್ಷಣೆ ನೀಡಿ, ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದರೂ ಸಹ ತನಿಖೆ ವಿಳಂಬವಾಗುತ್ತಿದೆ ಎಂದರೆ ಏನರ್ಥ? ಪೊಲೀಸರು ಹಣದ ಆಮಿಷಕ್ಕೆ ಬಲಿಯಾಗಿದ್ದಾರೆಯೆ ಅಥವಾ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂಬ ಅನುಮಾನ ಬರುತ್ತಿದೆ ಎಂದಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಕುತೂಹಲಕ್ಕಾದರೂ ಪೊಲೀಸರು ತನಿಖೆ ನಡೆಸಬೇಕಿತ್ತು. ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಬೇಕಿತ್ತು. ಆದರೆ ಅವರು ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಇಂತಹ ಅಪರಾಧಗಳು ಹೆಚ್ಚಲು ಕಾರಣವಾಗುತ್ತದೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ನವೆಂಬರ್ 06ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ದಸಂಸ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿವೆ.


ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

Also Read: Honour Killing in Karnataka: Man murders daughter for loving a Dalit man

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...