Homeಕರ್ನಾಟಕನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ಬೀರುವಿನಲ್ಲಿ ಸಿಕ್ಕ ವೋಟರ್ ಐಡಿ ಮತ್ತು 2015ರಲ್ಲಿ ಕಾಲುವೆಯಲ್ಲಿ ಸಿಕ್ಕಿದ್ದ ಅಪರಿಚಿತ ಶವ ಮರ್ಯಾದೆಗೇಡು ಹತ್ಯೆಯಾಗಿರುವುದನ್ನು ದೃಢಪಡಿಸುತ್ತವೆ.

- Advertisement -
- Advertisement -

ಮಂಡ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳು, ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿವೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವಿಚಿತ್ರ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮೇಘನ ಎಂಬ ಹುಡುಗಿಯ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿ, ದೂರು ನೀಡಿದ್ದಾರೆ. ಆದರೆ ಪೊಲೀಸರು ಈ ವಿಷಯದಲ್ಲಿ ಸೂಕ್ತ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದಿವೆ.

ಘಟನೆಯ ಹಿನ್ನೆಲೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೇಘನಾ ಎಂಬ ಹುಡುಗಿಯ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ಎಂಇಟಿ ಕಾಲೇಜಿನಲ್ಲಿ 2014-15 ರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತರ ಮೂಲಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸವರ್ಣಿಯ ಸಮುದಾಯಕ್ಕೆ ಸೇರಿದ ಟಿ.ಕೆ ಸ್ವಾಮಿ ಎಂಬುವವರ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ತದನಂತರ ಅವರಿಬ್ಬರೂ ಮದುವೆಯಾಗಿರುವುದಾಗಿಯೂ, ಆ ಮನೆಯವರಿಗೆ ತನ್ನ ಜಾತಿ ಗೊತ್ತಿರಲಿಲ್ಲ. ಈಗ ಗೊತ್ತಾಗಿ ತನಗೆ ತೊಂದರೆ ಕೊಡುತ್ತಿದ್ದಾರೆ. ಆದರೆ ತಾನು ಮನೆಗೆ ಬರುವುದಿಲ್ಲವೆಂದು ಮೇಘನಾ ಆಕೆಯ ತಾಯಿಗೆ ತಿಳಿಸಿ ನಾಪತ್ತೆಯಾಗಿದ್ದಳು. 5 ವರ್ಷದಿಂದ ಯಾವುದೇ ಸಂಪರ್ಕವಿರಲಿಲ್ಲ ಎಂದು ಆಕೆಯ ತಾಯಿ ಹೇಳಿದ್ದರು.

ಆದರೆ ಇತ್ತೀಚೆಗೆ ಅಕ್ಟೋಬರ್ 14 ರಂದು ಮೇಘನಾರವರ ತಾಯಿ ಮನೆ ಸ್ವಚ್ಛಗೊಳಿಸುತ್ತಿರುವಾಗ ಹಳೆಯ ಬೀರುವಿನಲ್ಲಿ ಟಿ.ಕೆ ಸ್ವಾಮಿಯ ವೋಟರ್ ಐಡಿ ಪತ್ತೆಯಾಗಿದೆ. ಅದರ ಆಧಾರದಲ್ಲಿ ತಿರುಮಲಾಪುರಕ್ಕೆ ತೆರಳಿ ವಿಚಾರಿಸಿದರೆ, ನಿಮ್ಮ ಮಗಳನ್ನು ಸ್ವಾಮಿ ಮನೆಯವರು 5 ವರ್ಷಗಳ ಹಿಂದೆಯೇ ಹತ್ಯೆ ಮಾಡಿದ್ದಾರೆ ಸ್ಥಳೀಯರು ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತಗೊಂಡ ತಾಯಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಹಳೆಯ ಅನುಮಾನಾಸ್ಪದ ಸಾವುಗಳು ಮತ್ತು ಪತ್ತೆಯಾಗದ ಶವಗಳ ದಾಖಲೆ ತೆಗೆದು ಪರಿಶೀಲಿಸಿದಾಗ 2015ರಲ್ಲಿ ಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತನ್ನ ಮಗಳು ಎಂದು ಮೇಘನಾ ತಾಯಿಯು ಗುರುತಿಸಿದ್ದಾರೆ. 2015 ರಲ್ಲಿ ಚಿನಕುರಳಿ ಪಕ್ಕದ ಬ್ಯಾಟರಾಯನಪುರ ನಾಲೆಯಲ್ಲಿ ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ. ಅದನ್ನು ಕೊಲೆ ಎಂದು ಪೊಲೀಸರು ಮಹಜರು ಮಾಡಿದ್ದಾರೆ.

ಹುಡುಗಿ ಮತ್ತು ಹುಡುಗ ಅನ್ಯಜಾತಿಗೆ ಸೇರಿದ್ದರಿಂದ ಹುಡುಗನ ಕುಟುಂಬದವರು ಆಕೆಯನ್ನು ಕೊಂದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಮೃತ ಮೇಘನಾಳ ತಾಯಿಯು ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ, ಬದಲಾಗಿ 5 ವರ್ಷ ಏನು ಮಾಡುತ್ತಿದ್ದೀರಿ? ನಿಮ್ಮ ಮಗಳು ಮದುವೆಯಾಗಿರುವುದಕ್ಕೆ ಸಾಕ್ಷಿ ಏನು? ನಾವು ಆರೋಪಿಗಳನ್ನು ಬಂಧಿಸುವುದಿಲ್ಲ, ಏಕೆಂದರೆ ಅವರು ಲಾಕಪ್ ಡೆತ್ ಆದರೆ ಯಾರು ಹೊಣೆ ಎಂದು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡುರವರು ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “ಸಂತ್ರಸ್ತಳ ತಾಯಿ ದೂರು ನೀಡಿ 15 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ. ನೊಂದವರಿಗೆ ರಕ್ಷಣೆ ನೀಡಿ, ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದರೂ ಸಹ ತನಿಖೆ ವಿಳಂಬವಾಗುತ್ತಿದೆ ಎಂದರೆ ಏನರ್ಥ? ಪೊಲೀಸರು ಹಣದ ಆಮಿಷಕ್ಕೆ ಬಲಿಯಾಗಿದ್ದಾರೆಯೆ ಅಥವಾ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂಬ ಅನುಮಾನ ಬರುತ್ತಿದೆ ಎಂದಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಕುತೂಹಲಕ್ಕಾದರೂ ಪೊಲೀಸರು ತನಿಖೆ ನಡೆಸಬೇಕಿತ್ತು. ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಬೇಕಿತ್ತು. ಆದರೆ ಅವರು ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಇಂತಹ ಅಪರಾಧಗಳು ಹೆಚ್ಚಲು ಕಾರಣವಾಗುತ್ತದೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ನವೆಂಬರ್ 06ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ದಸಂಸ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿವೆ.


ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

Also Read: Honour Killing in Karnataka: Man murders daughter for loving a Dalit man

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...