Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...