Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...