Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...