Homeಚಳವಳಿತೀವ್ರಗೊಂಡ 'ನಮ್ಮೂರಿಗೆ ಅಕೇಶಿಯಾ ಮರ ಬೇಡ' ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ತೀವ್ರಗೊಂಡ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ’ ಹೋರಾಟ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ

ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

- Advertisement -
- Advertisement -

‘ಪರಿಸರ ಮತ್ತು ಜೀವವೈವಿಧ್ಯತೆಗೆ ಕುತ್ತು ತರುವ ಅಕೇಶಿಯಾ ನಮಗೆ ಬೇಡವೇ ಬೇಡ, ಅನಧಿಕೃತವಾಗಿ ಎಂಪಿಎಂಗೆ ಗುತ್ತಿಗೆ ಮುಂದುವರೆಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ, ಮಲೆನಾಡು ನಮ್ಮದು’ ಎಂಬ ಘೋಷಣೆಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗದ ಬೆಕ್ಕಿನಕಲ್ಮಠ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಾಕಾರರು, ಪರಿಸರ ಕಾರ್ಯಕರ್ತರು ಮಲೆನಾಡನ್ನು ಮಾರಲು ಬಿಡುವುದಿಲ್ಲ ಎಂಬ ಘೋಷಣೆಗಳೊಂದಿಗೆ ನಗರದ ಸಿಸಿಎಫ್‌ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಪ್ರತಿಭಟನಾಕಾರರು ಸಿಸಿಎಫ್‌ ಕಚೇರಿ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಾಗ ಇಬ್ಬರ ನಡುವೆ ಜಟಾಪಟಿ ನಡೆದು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಹೋರಾಟಗಾರರಾದ ಕೆ.ಪಿ ಶ್ರೀಪಾಲ್ ಮಾತನಾಡಿ “ಇದು ಇಡೀ ಮಲೆನಾಡಿನ ಉಳಿವಿನ ಹೋರಾಟವಾಗಿದೆ. ಏಕೆಂದರೆ ಇಡೀ ಮಲೆನಾಡನ್ನು ಹಾಳು ಮಾಡಿದ ಎಂಪಿಎಂ ಹೆಸರಿನ ಅಕೇಶಿಯಾ ನೆಡುತೋಪು ಕಳೆದ ಆಗಸ್ಟ್‌ಗೆ ಅದರ ಲೀಸ್ ಅವಧಿ ಮುಗಿಯುತ್ತದೆ ಎಂದು ನಂಬಿದ್ದೆವು. ಆದರೆ ಎಂಪಿಎಂ ಕಾರ್ಖಾನೆ ಮುಚ್ಚಿಹೋಗಿದ್ದರೂ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ. ಏಕೆಂದರೆ ಇದರ ಹಿಂದೆ ಸಿಎಂ ಯಡಿಯೂರಪ್ಪನವರ ಕುಟುಂಬದ ಹಿತಾಸಕ್ತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯೇ ಇಲ್ಲದ ಮೇಲೆ ನವೀಕರಣ ಹೇಗೆ ಸಾಧ್ಯ? ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ, ಯಾವ ಶಾಸಕರ ಗಮನಕ್ಕೂ ಬಂದಿಲ್ಲ. ಈ ಅರಣ್ಯ ಜಾಗ ಬೇನಾಮಿಯಾಗಿ ಪ್ರೇರಣಾ ಟ್ರಸ್ಟ್‌ಗೆ, ಬಿ.ವೈ ರಾಘವೇಂದ್ರರಿಗೆ ಅಥಬಾ ಬಿ.ವೈ ವಿಜಯೇಂದ್ರರಿಗೆ ಹೋಗುತ್ತಿದೆಯೋ ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಚಿಂತಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ “ನಮಗೆ ಸೇರಬೇಕಾದ ಪರಿಸರ ಮತ್ತು ಕಾಡನ್ನು ನಮ್ಮ ಸರ್ಕಾರ ಮತ್ತು ರಾಜಕಾರಣಿಗಳು ಮಾರಲು ಹೊರಟಿದ್ದಾರೆ. ಅದನ್ನು ನಿಲ್ಲಿಸಬೇಕು. ಮತ್ತೆ 40 ವರ್ಷ ಈ ಅಕೇಶಿಯಾ ಮರಗಳು ಬೆಳೆದರೆ ಮರುಭೂಮಿಯನ್ನು ನೋಡಲು ನಾವು ರಾಜಸ್ಥಾನಕ್ಕೆ ಹೋಗಬೇಕಿಲ್ಲ, ಬದಲಿಗೆ ಶಿವಮೊಗ್ಗಕ್ಕೆ ಬಂದರೆ ಸಾಕು ಎನಿಸುವ ಪರಿಸ್ಥಿತಿ ಬರುತ್ತದೆ. ಈ ಸರ್ಕಾರಕ್ಕೆ ಕಿವಿ, ಕಣ್ಣು, ಮೂಗು ಏನು ಇಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನಮ್ಮ ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಆದರೆ ಸಿಎಂರವರ ಆದೇಶವನ್ನಷ್ಟೇ ನಾವು ಪಾಲಿಸುತ್ತಿದ್ದೇವೆ ಎಂದು ಹೇಳುತ್ತಾರೆ. ಇದು ನಮ್ಮ ಪ್ರತಿಯೊಬ್ಬರ ಮನೆಯ ಪ್ರಶ್ನೆಯಾಗಿದೆ. ಇದು ನಿಧಾನಕ್ಕೆ ನಮಗೆ ವಿಷವುಣಿಸುತ್ತಿದೆ. ಹಾಗಾಗಿ ಏನೇ ಬೆಲೆ ತೆತ್ತಾದರೂ ಸರಿಯೇ ನಾವು ಮಲೆನಾಡನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ ‘ಜನರು ಬಿಜೆಪಿ ಓಟು ಹಾಕುತ್ತಿದ್ದಾರೆ ಎಂದರೆ ದೇಶವನ್ನು ಮಾರಿಕೊಳ್ಳಿ ಎಂದು ಪರ್ಮಿಶನ್ ಕೊಟ್ಟಂತೆಯೇ? ನಾವು ಅರಣ್ಯವನ್ನು ಪ್ರೀತಿಸುತ್ತೇವೆ. ಈ ಅರಣ್ಯವನ್ನು ಮತ್ತೆ ಅರಣ್ಯ ಇಲಾಖೆಗೆ ಕೊಡಿ ಎಂದು ಒತ್ತಾಯಿಸುತ್ತಿದ್ದೇವೆಯೇ ಹೊರತು ನಮಗೆ ಕೊಡಿ ಎಂತಲ್ಲ’ ಎಂದರು.

ಈ ಹಿಂದೆಯಿಂದಲೂ ಅಕೇಶಿಯಾ ಅಪಾಯಕಾರಿ ಎಂದು ನಾವು ಹೇಳಿದ್ದೆವು. ಆದರೆ ಅದನ್ನು ಸರ್ಕಾರಗಳು ಪರಿಗಣಿಸಲಿಲ್ಲ. ಈಗ ಅದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಅರಣ್ಯವನ್ನು ರಕ್ಷಿಸಬೇಕು. ಅದಕ್ಕಾಗಿ ಈ ಚಳವಳಿಯನ್ನು ತೀವ್ರಗೊಳಿಸುತ್ತೇವೆ. ದಕ್ಷಿಣ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಈ ಚಳವಳಿ ಹಬ್ಬಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ಸಾಗರ ರಾಘವೇಂದ್ರ, ಶಶಿ ಸಂಪಳ್ಳಿ, ಕಲ್ಕುಳಿ ವಿಠಲ್ ಹೆಗಡೆ, ಪಿ. ಕುಮಾರಸ್ವಾಮಿ ಮುಂತಾದವರು ಮಾತನಾಡಿದರು.


ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...