Homeಕರ್ನಾಟಕ2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು- ಬಸವಜಯ ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ರ‍್ಯಾಲಿಯಲ್ಲಿ ಸಮುದಾಯದ ಸುಮಾರು 10 ಲಕ್ಷ ಜನ ಸೇರಬಹುದು ಎಂದು ಮುಖಂಡರು ಅಂದಾಜಿಸಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು (ಪೆ. 21) ಬೆಂಗಳೂರಿನ ಅರಮನೆ ಮೈದಾನದಲ್ಲಿ 21ರಂದು ಮಹಾರ‍್ಯಾಲಿ ಮೂಲಕ ಮುಕ್ತಾಯಗೊಳ್ಳಲಿದೆ.

2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದ್ದು, ಇದಕ್ಕಿಂತ ಹೆಚ್ಚು ಜನ ಸೇರಿದರೂ ಕುಳಿತುಕೊಳ್ಳಲು ತೊಂದರೆಯಾಗದಂತೆ ಮ್ಯಾಟ್‌ಗಳನ್ನು ಹಾಕಲಾಗಿದೆ. ಒಟ್ಟು ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಧ್ಯದಲ್ಲಿ ಅತಿಗಣ್ಯರಿಗೆ ಅಂದರೆ ಜನಪ್ರತಿನಿಧಿಗಳಿಗೆ, ಬಲ ಮತ್ತು ಎಡಭಾಗದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪದಾಧಿಕಾರಿಗಳಿಗೆ ಮೀಸಲಿಡಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

“ಮಹಾರ‍್ಯಾಲಿಯಲ್ಲಿ ಹತ್ತು ಲಕ್ಷ ಜನ ಸೇರಿದರೂ ಊಟದ ಕೊರತೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಿಂದ ನಮ್ಮ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತೆಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತದೆ. 18 ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, “ಸುಮಾರು 600 ಕಿ.ಮೀ. ಪಾದಯಾತ್ರೆಯು ಮುಕ್ತಾಯವಾಗಿದೆ. ಆದರೂ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮೀಸಲಾತಿಗಾಗಿ ಮಹಾರ‍್ಯಾಲಿಯಲ್ಲಿ ಮತ್ತೊಮ್ಮೆ ಒತ್ತಾಯಿಸಲಾಗುವುದು. ನಂತರ ವಿಧಾನಸೌಧದವರೆಗೆ ತೆರಳಿ ಧರಣಿ ನಡೆಸಲಾಗುವುದು. ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...