Homeಕರ್ನಾಟಕ2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು- ಬಸವಜಯ ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ರ‍್ಯಾಲಿಯಲ್ಲಿ ಸಮುದಾಯದ ಸುಮಾರು 10 ಲಕ್ಷ ಜನ ಸೇರಬಹುದು ಎಂದು ಮುಖಂಡರು ಅಂದಾಜಿಸಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು (ಪೆ. 21) ಬೆಂಗಳೂರಿನ ಅರಮನೆ ಮೈದಾನದಲ್ಲಿ 21ರಂದು ಮಹಾರ‍್ಯಾಲಿ ಮೂಲಕ ಮುಕ್ತಾಯಗೊಳ್ಳಲಿದೆ.

2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದ್ದು, ಇದಕ್ಕಿಂತ ಹೆಚ್ಚು ಜನ ಸೇರಿದರೂ ಕುಳಿತುಕೊಳ್ಳಲು ತೊಂದರೆಯಾಗದಂತೆ ಮ್ಯಾಟ್‌ಗಳನ್ನು ಹಾಕಲಾಗಿದೆ. ಒಟ್ಟು ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಧ್ಯದಲ್ಲಿ ಅತಿಗಣ್ಯರಿಗೆ ಅಂದರೆ ಜನಪ್ರತಿನಿಧಿಗಳಿಗೆ, ಬಲ ಮತ್ತು ಎಡಭಾಗದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪದಾಧಿಕಾರಿಗಳಿಗೆ ಮೀಸಲಿಡಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

“ಮಹಾರ‍್ಯಾಲಿಯಲ್ಲಿ ಹತ್ತು ಲಕ್ಷ ಜನ ಸೇರಿದರೂ ಊಟದ ಕೊರತೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಿಂದ ನಮ್ಮ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತೆಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತದೆ. 18 ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, “ಸುಮಾರು 600 ಕಿ.ಮೀ. ಪಾದಯಾತ್ರೆಯು ಮುಕ್ತಾಯವಾಗಿದೆ. ಆದರೂ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮೀಸಲಾತಿಗಾಗಿ ಮಹಾರ‍್ಯಾಲಿಯಲ್ಲಿ ಮತ್ತೊಮ್ಮೆ ಒತ್ತಾಯಿಸಲಾಗುವುದು. ನಂತರ ವಿಧಾನಸೌಧದವರೆಗೆ ತೆರಳಿ ಧರಣಿ ನಡೆಸಲಾಗುವುದು. ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...