Homeಕರ್ನಾಟಕ2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು- ಬಸವಜಯ ಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

ಕ್ಯಾಟಗರಿ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್‌ ಪಾದಯಾತ್ರೆ ನಡೆಸಿರುವ ಲಿಂಗಾಯತ ಪಂಚಮಸಾಲಿ ಸಮುದಾಯವು ಬೆಂಗಳೂರಿನಲ್ಲಿ ಭಾನುವಾರ ಮಹಾರ‍್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ರ‍್ಯಾಲಿಯಲ್ಲಿ ಸಮುದಾಯದ ಸುಮಾರು 10 ಲಕ್ಷ ಜನ ಸೇರಬಹುದು ಎಂದು ಮುಖಂಡರು ಅಂದಾಜಿಸಿದ್ದಾರೆ.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ 38 ದಿನಗಳ ಪಾದಯಾತ್ರೆ ಶನಿವಾರ ಅಂತಿಮ ಘಟ್ಟಕ್ಕೆ ಬಂದಿದ್ದು, ಇಂದು (ಪೆ. 21) ಬೆಂಗಳೂರಿನ ಅರಮನೆ ಮೈದಾನದಲ್ಲಿ 21ರಂದು ಮಹಾರ‍್ಯಾಲಿ ಮೂಲಕ ಮುಕ್ತಾಯಗೊಳ್ಳಲಿದೆ.

2 ಲಕ್ಷಕ್ಕೂ ಹೆಚ್ಚು ಕುರ್ಚಿಗಳನ್ನು ಹಾಕಲಾಗಿದ್ದು, ಇದಕ್ಕಿಂತ ಹೆಚ್ಚು ಜನ ಸೇರಿದರೂ ಕುಳಿತುಕೊಳ್ಳಲು ತೊಂದರೆಯಾಗದಂತೆ ಮ್ಯಾಟ್‌ಗಳನ್ನು ಹಾಕಲಾಗಿದೆ. ಒಟ್ಟು ಮೂರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಮಧ್ಯದಲ್ಲಿ ಅತಿಗಣ್ಯರಿಗೆ ಅಂದರೆ ಜನಪ್ರತಿನಿಧಿಗಳಿಗೆ, ಬಲ ಮತ್ತು ಎಡಭಾಗದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪದಾಧಿಕಾರಿಗಳಿಗೆ ಮೀಸಲಿಡಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

“ಮಹಾರ‍್ಯಾಲಿಯಲ್ಲಿ ಹತ್ತು ಲಕ್ಷ ಜನ ಸೇರಿದರೂ ಊಟದ ಕೊರತೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಿಂದ ನಮ್ಮ ಸಮಾಜದವರು 2.5 ಲಕ್ಷ ರೊಟ್ಟಿ ತಂದಿದ್ದಾರೆ. ಜೊತೆಗೆ ಪಲಾವ್ ಮತ್ತು ಮಜ್ಜಿಗೆ ನೀಡಲಾಗುತ್ತದೆ. 18 ಜಿಲ್ಲೆಗಳಿಂದ 10 ಲಕ್ಷಕ್ಕೂ ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, “ಸುಮಾರು 600 ಕಿ.ಮೀ. ಪಾದಯಾತ್ರೆಯು ಮುಕ್ತಾಯವಾಗಿದೆ. ಆದರೂ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಮೀಸಲಾತಿಗಾಗಿ ಮಹಾರ‍್ಯಾಲಿಯಲ್ಲಿ ಮತ್ತೊಮ್ಮೆ ಒತ್ತಾಯಿಸಲಾಗುವುದು. ನಂತರ ವಿಧಾನಸೌಧದವರೆಗೆ ತೆರಳಿ ಧರಣಿ ನಡೆಸಲಾಗುವುದು. ಸರ್ಕಾರಕ್ಕೆ ಮಾರ್ಚ್‌ 4ರವರೆಗೆ ಗಡುವು ನೀಡುತ್ತೆವೆ. ಒಪ್ಪದಿದ್ದರೆ ಮಾರ್ಚ್ 5ರಿಂದ ವಿಧಾನಸೌಧ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...