Homeಮುಖಪುಟಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿ: ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶಕ್ತಿ ಪ್ರದರ್ಶನ

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ಕೈಸರ್‌ಗಂಜ್‌ನಲ್ಲಿ ಬೃಹತ್ ರ್ಯಾಲಿಯನ್ನು ಭಾನುವಾರ ನಡೆಸಿದ್ದಾರೆ. ಅವರ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವದರಿಂದ ತಮ್ಮ ಶಕ್ತಿ ಪ್ರದರ್ಶನಕ್ಕಾಗಿಯೇ ಈ ರ್ಯಾಲಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಆದರೂ ಕೇಂದ್ರ ಸರ್ಕಾರ ಮಾತ್ರ ತಮ್ಮ ಸಂಸದನ ವಿರುದ್ಧ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಹಾಗಾಗಿ ಅವರು ಇದೀಗ  ಈ ಭಾಗದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ಬಿಜೆಪಿಗೆ ನೀಡುವ ಉದ್ದೇಶವೂ ಈ ರ್ಯಾಲಿಯ ಹಿಂದಿದೆ ಎಂದು ರಾಜಕೀಯ ವಿಶ್ಲೇಷಕರು ಹಾಗೂ ಸಿಂಗ್ ಅವರ ಆಪ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂಬತ್ತು ವರ್ಷ ಪೂರೈಸಿದ್ದನ್ನು ಸಂಭ್ರಮಿಸಲು ಈ ರ್ಯಾಲಿಯನ್ನು ಆಯೋಜಿಸಿದ್ದಾಗಿ ಸಿಂಗ್ ಅವರು ಹೇಳಿದ್ದಾರೆ. ಆದರೆ ಇದು ಅವರ ಕ್ಷೇತ್ರದಲ್ಲಿ ತಮ್ಮ ಶಕ್ತಿ ಕುಂದಿಲ್ಲ ಎನ್ನುವ ಸಂದೇಶವನ್ನು ನೀಡಲು ಎನ್ನುವುದು ಹಲವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ವಿಡಿಯೋ, ಫೋಟೊ, ವಾಟ್ಸ್​ಆ್ಯಪ್ ಚಾಟ್ ಒದಗಿಸುವಂತೆ ಕುಸ್ತಿಪಟುಗಳಿಗೆ ಸಾಕ್ಷ್ಯ ಕೇಳಿದ ಪೊಲೀಸರು

ಈ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿರುವ ಬ್ರಿಜ್‌ಭೂಷಣ್, ”ಕೆಲವು ಬಾರಿ ದುಃಖವನ್ನು, ಕೆಲವು ಬಾರಿ ನೋವನ್ನು ಅನುಭವಿಸಬೇಕಾಗುತ್ತದೆ, ಕೆಲವು ಸಲ ವಿಷವನ್ನೂ ಕುಡಿಯಬೇಕಾಗುತ್ತದೆ… ಆಗ ಮಾತ್ರವೇ ಈ ಜಗತ್ತಿನಲ್ಲಿ ಬದುಕಲು ಸಾಧ್ಯ” ಎಂಬ ಉರ್ದು ಕವಿತೆಯ ಸಾಲುಗಳ ಮೂಲಕ ಬ್ರಿಜ್‌ಭೂಷನ್ ಸಿಂಗ್ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

”ದೇವರು ಇಚ್ಛಿಸಿದ್ದು ನಡೆದೇ ತೀರುತ್ತದೆ ಅಂದಮೇಲೆ ಅದರ ಕುರಿತು ವಾದ ಮಾಡಿ ಪ್ರಯೋಜನವೇನು?” ಎನ್ನುವ ‘ರಾಮಚರಿತ ಮಾನಸ’ದ ಸಾಲುಗಳನ್ನೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿ ಅರ್ಥವಿಲ್ಲದೇ ಮಾತನಾಡಿದ ಬ್ರಿಜ್‌ಭೂಷಣ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಸ್ತಾಪವನ್ನು ಮಾಡಲಿಲ್ಲ. ಹಾಗೆಯೇ ತಮ್ಮ ಮೇಲಿನ ಆರೋಪಕ್ಕೆ ಸಮಜಾಯಿಷಿಯನ್ನೂ ನೀಡಲಿಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಾ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಬೃಹತ್ ರ್ಯಾಲಿಯಲ್ಲಿ ಮಧ್ಯಪ್ರದೇಶದ ಸಚಿವ, ಉತ್ತರ ಪ್ರದೇಶದ ಐವರು ಶಾಸಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ, ತಾನು ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದು ಲೈಂಗಿಕ ಕಿರುಕುಳದ ಆರೋಪಿ, ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷನ್ ಶರಣ್ ಸಿಂಗ್ ಹೇಳಿದರು.

ಕುಸ್ತಿಪಟುಗಳ ಪ್ರತಿಭಟನೆಗೆ ರೈತ ಸಂಘಟನೆಗಳು, ಬೇರೆ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿರುವುದರಿಂದ ಕೇಂದ್ರ ಸಕಾರ್ರರದ ಮೇಲೆ ಒತ್ತಡ ಹೆಚ್ಚಾಗಿದೆ. ಇತ್ತಿಚೆಗೆ ಕ್ರೀಡಾಸಚಿವ ಅನುರಾಗ ಠಾಕೂರ್ ಅವರು ಜೂ.15ರೊಳಗೆ ತನಿಖೆ ಮುಗಿಸುವ ಭರವಸೆ ನೀಡಿದ್ದಾರೆ. ಹಾಗಾಗಿ ಕ್ರಮ ತೆಗೆದುಕೊಂಡರೆ ಬ್ರಿಜ್‌ಭೂಷಣ್ ಸಿಂಗ್ ಅವರು, ಪಕ್ಷ ಬಿಡುವ ಯೋಚನೆಯಲ್ಲೂ ಇದ್ದಾರೆ ಎಂದು ಹೇಳಲಾಗುತ್ತಿದೆ.

ಬ್ರಿಜ್‌ಭೂಷಣ್ ಸಿಂಗ್ ಅವರು ಈ ಹಿಂದೆ ಬೇರೆ ಪಕ್ಷದಲ್ಲಿದ್ದರು. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಂಡರೆ ಅವರು ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ಬ್ರಿಜ್‌ಭೂಷಣ್ ಅವರು ಕೆಲವು ದಿನಗಳ ಹಿಂದೆ ಇದಕ್ಕೆ ಪುಷ್ಟಿ ನೀಡುವಂತಹ ಒಂದು ಹೇಳಿಕೆ ನೀಡಿದ್ದರು.

”ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಯಾಕೆಂದರೆ ಅವರಿಗೆ ‘ಸತ್ಯ’ ತಿಳಿದಿದೆ. ಅಖಿಲೇಶ್‌ನನ್ನು ನಾನು ಆತನ ಸಣ್ಣ ವಯಸ್ಸಿನಿಂದ ನೋಡುತ್ತಿದ್ದೇನೆ. ಉತ್ತರ ಪ್ರದೇಶದ ಶೇ 80ರಷ್ಟು ಕುಸ್ತಿಪಟುಗಳು ಸಮಾಜವಾದಿ ಸಿದ್ಧಾಂತವನ್ನು ಪ್ರತಿಪಾದಿಸುತ್ತಾರೆ” ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...